ಕಾರವಾರ: ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ದೇಶದ್ರೋಹಿಗಳು, ಇದು ರೈತರ ಹೋರಾಟ ಅಲ್ಲ ದೇಶದ್ರೋಹಿಗಳ ಹೋರಾಟ. ಎಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗಡೆ ಕಿಡಿಕಾರಿದ್ದಾರೆ.
ಜಿಲ್ಲೆಯ ಮುಂಡಗೋಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಲ್ಲಿ ಪ್ರತಿಭಟನೆಗೆ ಬರುವವರು ದೊಡ್ಡ ದೊಡ್ಡ ಗಾಡಿ ತೆಗೆದುಕೊಂಡು ಟೊಯೋಟಾ ಕಾರಲ್ಲಿ ಬರುತ್ತಾರೆ, ರೈತರ ಬಳಿ ಅಷ್ಟೆಲ್ಲಾ ದುಡ್ಡಿದೆಯಾ…? ಪ್ರತಿಭಟನೆ ಮಾಡುತ್ತಿರುವವರು ರೈತರೇ ಅಲ್ಲ, ಇದು ರೈತರ ಹೋರಾಟ ಅಲ್ಲ ದೇಶದ್ರೋಹಿಗಳ ಹೋರಾಟ.
ಖಲಿಸ್ತಾನಿಗಳ ಹೋರಾಟ, ರೈತರ ಹೆಸರಿಟ್ಟುಕೊಂಡಿದ್ದಾರೆ. ಅಷ್ಟೇ ಅವರಿಗೆ ಬೇರೆ ದೇಶದವರು ಹಣ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಹೋರಾಟಕ್ಕೆ ಬರುವ ರೈತರು ಅನ್ಯಾಯ ಆಗಿದೆ ಅಂತ ಅವರು ಬೆಂಜ್ ಗಾಡಿಯಲ್ಲಿ, ಹೊಸ ಟ್ಯಾಕ್ಟರ್ ತಗೊಂಡು ಬರುವುದು ಎಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ದ ಕಿಡಿಕಾರಿದರು.