News Karnataka Kannada
Friday, May 03 2024
ಉತ್ತರಕನ್ನಡ

ಸೂಕ್ತ ಚಿಕಿತ್ಸೆ ಲಭಿಸದೆ ಮೂರು ತಿಂಗಳ ಮಗು ಸಾವು: ಆಸ್ಪತ್ರೆಯ ಮುಂದೆ ಶವ ಇಟ್ಟು ಪ್ರತಿಭಟನೆ

Three-month-old baby dies due to lack of proper treatment, body laid in front of hospital
Photo Credit : News Kannada

ಕಾರವಾರ: ನಗರದ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕ್ರಿಮ್ಸ್)ಯಲ್ಲಿ ಸೂಕ್ತ ಚಿಕಿತ್ಸೆ ಲಭಿಸದೆ ಮೂರು ತಿಂಗಳ ಮಗು ಮೃತಪಟ್ಟ ಘಟನೆ ನಡೆಸಿದ್ದು ಆಕ್ರೋಶಗೊಂಡ ಪಾಲಕರು, ಕುಟುಂಬದವರು ಮಗುವಿನ ಮೃತದೇಹವನ್ನು ಆಸ್ಪತ್ರೆಯ ಮುಂದಿಟ್ಟು ಪ್ರತಿಭಟನೆಯನ್ನು ಗುರುವಾರ ನಡೆಸಿದ್ದಾರೆ.

ಕಿನ್ನರ ಮೂಲದ ರಾಜೇಶ ನಾಗೇಕರ್ ಅವರ ಮೂರು ತಿಂಗಳ ಗಂಡು ಮಗು ರಾಜನ್ ನಾಗೇಕರ್ ಗೆ ಕಫ ತುಂಬಿಕೊಂಡಿತ್ತು. ಮಕ್ಕಳ ವೆಂಟಿಲೇಟರ್ ಆಂಬುಲೆನ್ಸ್ ಇಲ್ಲದಿರುವುದೇ ಮಗುವಿನ ಸಾವಿಗೆ ಕಾರಣ ಎಂದು ಮಗುವಿನ ತಂದೆ ರಾಜೇಶ ನಾಗೇಕರ ಆರೋಪಿಸಿದ್ದಾರೆ.

ಮೂರು ದಿನಗಳಿಂದ ಇಲ್ಲಿನ ಮೆಡಿಕಲ್ ಕಾಲೇಜ್ ನ ಮಕ್ಕಳ ವಿಶೇಷ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಒಳಪಡಿಸಲಾಗಿತ್ತು. ಕಳೆದ ಬುಧವಾರ ಮಗುವಿನ ಆರೋಗ್ಯ ಹದಗೆಟ್ಟ ಕಾರಣದಿಂದ ಉಡುಪಿಯ ಆಸ್ಪತ್ರೆಗೆ ಕೊಂಡೊಯ್ಯಲು ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಶಿಫಾರಸು ಮಾಡಿದ್ದರು. ಆದರೆ, ಸರ್ಕಾರಿ ಮೆಡಿಕಲ್ ಕಾಲೇಜ್ ನಲ್ಲಿ ಮಕ್ಕಳ ವಿಶೇಷ ಆಂಬುಲೆನ್ಸ್ ಸೌಕರ್ಯ ಇಲ್ಲದ ಕಾರಣ ಉಡುಪಿಯಿಂದ ಆಂಬುಲೆನ್ಸ್ ತರಿಸಲಾಯಿತು. ಅಷ್ಟರಲ್ಲಿ ಮಗು ಮೃತಪಟ್ಟಿದೆ.

ಆಸ್ಪತ್ರೆಯಲ್ಲಿ ಮಕ್ಕಳಆಂಬುಲೆನ್ಸ್ ಸೌಲಭ್ಯ ಇಲ್ಲದಿರುವುದೇ ಮಗುವಿನ ಸಾವಿಗೆ ಕಾರಣ ಎಂದು ಪಾಲಕರು ಆಕ್ಷೇಪಿಸಿದರು. ಜಿಲ್ಲಾವಿದ್ಯಾರ್ಥಿ ಒಕ್ಕೂಟದ ರಾಘು ನಾಯ್ಕ, ಹಾಗೂ ಇತರರು ಪ್ರತಿಭಟನೆಯಲ್ಲಿದ್ದರು. ಮದುವೆಯಾದ ಐದು ವರ್ಷದ ನಂತರ ಮಗು ರಾಜೇಶ ಜನಿಸಿದ್ದ. ದೇವರಿಗೆ ಹರಕೆ ಹೊತ್ತ ನಂತರ ಮಗು ಹುಟ್ಟಿತ್ತು. ಈಗ ಅದೂ ಮೃತಪಟ್ಟಿರುವುದು ದಂಪತಿಗಳ ತೀವ್ರ ದುಖಕ್ಕೆ ಕಾರಣವಾಗಿದೆ. ಮಗುವಿಗೆ ತೀವೃ ಅನಾರೋಗ್ಯ ಸ್ಥಿತಿಯಲ್ಲಿ ಹೆಚ್ಚಿನ ಉತ್ತಮ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಸಾಗಿಸಲು ವೆಂಟಿಲೇಟರ್ ವ್ಯವಸ್ಥೆ ಇರುವ ಆಂಬುಲೆನ್ಸ್ ವ್ಯವಸ್ಥೆ ಆಸ್ಪತ್ರೆಯಲ್ಲಿ ಇಲ್ಲದ ಕಾರಣ ಮಗು ಮೃತಪಟ್ಟಿದೆ.

ಆರು ತಿಂಗಳ ಹಿಂದೆ ಕ್ರಿಮ್ಸ್ ನಲ್ಲಿ ಮಕ್ಕಳವಿಶೇಷ ತುರ್ತು ನಿಗಾ ಘಟಕ ಪ್ರಾರಂಭಿಸಲಾಗಿದೆ. ಇದರಿಂದ ಇಲ್ಲಿಯವರೆಗೆ ಸಾಕಷ್ಟು ಮಕ್ಕಳ ಜೀವ ಉಳಿಸಲಾಗಿದೆ. ಈ ಮಗುವಿಗೂ ಚಿಕಿತ್ಸೆ ನೀಡಿದರೂ ನಮ್ಮ ಕೈ ಮೀರಿತು. ನಮ್ಮಲ್ಲಿ ಮಕ್ಕಳ ವೆಂಟಿಲೇಟರ್ ಇರುವ ಆಂಬುಲೆನ್ಸ್ ಇಲ್ಲ. ಅದಕ್ಕೆ ಪ್ರಸ್ತಾವನೆ ಕಳಿಸಲಾಗಿದೆ ಎಂದು ಕ್ರಿಮ್ಸ್ ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ರಾಜಕುಮಾರ ಮರೋಳ ಪ್ರತಿಕ್ರಿಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು