ಕಾರವಾರ: ವಿಧಾನಸಭಾ ಚುನಾವಣೆ ಬಳಿಕ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ಕಾಂಗ್ರೆಸ್ ಸೇರ್ಪಡೆಯಾದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಇಂದು(ಏಪ್ರಿಲ್ 11) ತಮ್ಮ ನೂರಾರು ಬೆಂಬಲಿಗರೊಂದಿಗೆ ವಿವೇಕ್ ಕಾಂಗ್ರೆಸ್ ಸೇರ್ಪಡೆಗೊಂಡರು
ಕಾಂಗ್ರೆಸ್ ಸೇರ್ಪಡೆಗೆ ಕಾರಣ ತಿಳಿಸಿದ ವಿವೇಕ್, ನಮ್ಮ ಕಾರ್ಯರ್ತರಿಗೆ ಪಕ್ಷದಲ್ಲಿ ಆದ ತಾರತಮ್ಯ ಮನಗಂಡು ಈ ನಿರ್ಧಾರಕ್ಕೆ ಬಂದಿದ್ದೆನೆ. ನಮ್ಮ ಕಾರ್ಯರ್ತರಿಗೆ ಪಕ್ಷದಲ್ಲಿ ಸ್ಥಾನ ಮಾನ ಕೊಡಿಸುವ ವಿಚಾರದಲ್ಲಿ ಅಸಮಾಧಾನ ಆಗಿದೆ. ವಿಧಾನ ಸಭೆ ಚುನಾವಣೆಯಲ್ಲಿ ಕೆಲ ಬಿಜೆಪಿಯವರೆ ನಮ್ಮ ತಂದೆಯವರನ್ನ ಸೋಲಿಸಲು ಪ್ರಯತ್ನಿಸಿದ್ರು. ಆದ್ರು ಸಹಿತ ನಮ್ಮ ತಂದೆಯವರಾದ ಶಿವರಾಮ್ ಹೆಬ್ಬಾರ್ ಗೆಲುವು ಸಾಧಿಸಿದ್ರು. ಇದರಿಂದ ಅವರಿಂದ ನಮಗೆ ಅಸಮಾಧಾನ ಉಂಟು ಮಾಡಿತು ಎಂದು ಆರೋಪಿಸಿದ್ದಾರೆ.