News Karnataka Kannada
Monday, April 29 2024
ಉತ್ತರಕನ್ನಡ

ಮಹಾರಾಷ್ಟ್ರ ಸಮುದ್ರದಲ್ಲಿ ವೇವ್ ರೈಡರ್ ಬಾಯ್‌ ಜಾಗ ಪತ್ತೆ: ಕಳವು ಶಂಕೆ

ವೇವ್ ರೈಡರ್ ಬಾಯ್‌ನನ್ನು ಕಳ್ಳರು ಕದ್ದೊಯ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಬ್ಬಿ ಸಮುದ್ರದಲ್ಲಿ ನಡೆದಿದೆ‌.
Photo Credit : News Kannada

ಕಾರವಾರ: ವೇವ್ ರೈಡರ್ ಬಾಯ್‌ನನ್ನು ಕಳ್ಳರು ಕದ್ದೊಯ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಬ್ಬಿ ಸಮುದ್ರದಲ್ಲಿ ನಡೆದಿದೆ‌.

ಈ ವೇವ್ ರೈಡರ್ ಬಾಯ್‌ ಚಂಡಮಾರುತ, ಗಾಳಿಯ ಪ್ರಮಾಣ, ಮಳೆಯ ಮುನ್ಸೂಚನೆಯನ್ನು ನೀಡುತ್ತಿತ್ತು. ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಕೇಂದ್ರವು ಅಧ್ಯಯನ ದೃಷ್ಟಿಯಿಂದ ಕಾರವಾರದಲ್ಲಿರುವ ಕರ್ನಾಟಕ ವಿಶ್ವವಿದ್ಯಾಲಯದ ಕಡಲ ಜೀವಶಾಸ್ತ್ರ ಅಧ್ಯಯನ ಕೇಂದ್ರಕ್ಕೆ ನೀಡಿತ್ತು.

ಕಾರವಾರದ ಕದಂಬ ನೌಕಾ ನೆಲೆ ಇರುವ ಅರಬ್ಬಿ ಸಮುದ್ರ ಭಾಗದಲ್ಲಿ ಇದನ್ನು ಅಳವಡಿಸಲಾಗಿತ್ತು.  ಆದರೆ ಇದೀಗ ಜಿಪಿಎಸ್‌ನಲ್ಲಿ ಮಹಾರಾಷ್ಟ್ರದ ರತ್ನಗಿರಿ ಭಾಗದ ಹೊರಭಾಗದ ಜಾಗವನ್ನು ಇದೆ ಎಂದು ತೋರಿಸಿದೆ. ಹೀಗಾಗಿ ಇದನ್ನು ಕದ್ದಿರುವ ಸಾಧ್ಯತೆಯನ್ನು ಇದರ ಉಸ್ತುವಾರಿ ಹೊತ್ತಿರುವ ಜಗನ್ನಾಥ್ ರಾಥೋಡ್ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು