ಮಂಗಳೂರು: ಚಲಿಸುತ್ತಿದ್ದ ರೈಲಿನಿಂದ ಯುವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಬಳಿ ನಡೆದಿದೆ. ನೇತ್ರಾವತಿ ನದಿಗೆ ಹಾರಿ ನಯನಾ ಎಂ.ಜಿ (27 ) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತುಮಕೂರಿನ ಮಧುಗಿರಿ ನಿವಾಸಿ ನಯನಾ ಎಂ.ಜಿ ಬೆಂಗಳೂರಿನಿಂದ ಮಂಗಳೂರಿಗೆ ಹೊರಟ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಬಂಟ್ವಾಳ ಸಮೀಪ ಹಾದು ಹೋಗುವ ನೇತ್ರಾವತಿ ಸೇತುವೆ ಬಂದಂತೆ ನದಿಗೆ ಹಾರಿ ಮಹಿಳೆ ಯವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ನು ಮುಳುಗುತಜ್ಞ ಮಹಮ್ಮದ್ ತಂಡ ನದಿಯಿಂದ ನಯನಾ ಎಂ.ಜಿಯವರ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821