Bengaluru 29°C
Ad

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕುರಿತು ನಾಳೆ ಕರವೇ ಪ್ರತಿಭಟನೆ

ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲಿ ಶೇ.80 ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಶೇ.100 ಉದ್ಯೋಗ ಮೀಸಲಾತಿ ಒದಗಿಸುವುದು ಸೇರಿದಂತೆ ವಿವಿಧ 10 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆ (ಜು.1ರಂದು) ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ

ಬೆಂಗಳೂರು : ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲಿ ಶೇ.80 ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಶೇ.100 ಉದ್ಯೋಗ ಮೀಸಲಾತಿ ಒದಗಿಸುವುದು ಸೇರಿದಂತೆ ವಿವಿಧ 10 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆ (ಜು.1ರಂದು) ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕರವೇ ಪ್ರತಿಭಟನೆಗೆ ಹಲವು ಸಿನಿಮಾ ತಾರೆಯರೂ ಸಾಥ್ ನೀಡಲಿದ್ದಾರೆ.

Ad
300x250 2

ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಳವಾಗಿದ್ದು, ಇದರಿಂದ ಖಾಸಗಿ ವಲಯದಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಹೀಗಾಗಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳು ಶೇಕಡಾ 100 ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಇತರೆ ಗ್ರೂಪ್‌ಗಳಲ್ಲಿ ಶೇಕಡ 80 ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ನಾಳೆ ಪ್ರತಿಭಟನೆ ನಡೆಸಲಾಗುತ್ತದೆ.

Ad
Ad
Nk Channel Final 21 09 2023
Ad