ಬೆಂಗಳೂರು: ಇಂದು ಶುಕ್ರವಾರ(ಸೆ.29) ಕರ್ನಾಟಕ ಬಂದ್ ಕರೆ ನೀಡಲಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ವಿವಿಧ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಈ ಬಂದ್ಗೆ ನಾಡಿನ ಅನೇಕ ಸಂಘ, ಸಂಸ್ಥೆಗಳು ತಮ್ಮ ಬೆಂಬಲವನ್ನು ನೀಡಿವೆ. ಬಂದ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ. ಕರ್ನಾಟಕ ಬಂದ್ ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6ವರೆಗೆ ನಡೆಯಲಿದೆ.
ಬೆಳಗ್ಗೆ ಟೌನ್ಹಾಲ್ನಿಂದ ಫ್ರೀಡಂ ಪಾರ್ಕ್ವರೆಗೆ ರ್ಯಾಲಿ ಹಮ್ಮಿಕೊಂಡಿರೋ ಕನ್ನಡ ಪರ ಹೋರಾಟಗಾರರು, ಟೋಲ್ಗಳಿಗೆ ಮುತ್ತಿಗೆ ಹಾಕಿ ರೈಲು, ಹೆದ್ದಾರಿ ತಡೆಯೋದಕ್ಕೂ ಪ್ಲ್ಯಾನ್ ಮಾಡಿದ್ದಾರೆ.
ಬಂದ್ ವೇಳೆ ಏನಿರಲ್ಲ?
ಹೋಟೆಲ್
ಬೇಕರಿ
ಚಿತ್ರಮಂದಿರ
ಓಲಾ, ಉಬರ್
ಆಟೋ, ಕ್ಯಾಬ್
ಗೂಡ್ಸ್ ವಾಹನ
ಲಾರಿ ಮಾಲೀಕರು
ಜ್ಯುವೆಲರಿ ಶಾಪ್
ಜಿಮ್
ಬೀದಿ ಬದಿ ವ್ಯಾಪಾರ
ರಾಷ್ಟ್ರೀಯ ಹೆದ್ದಾರಿ ಬಂದ್
ಪಡಿತರ ಅಂಗಡಿ
ಶಾಪಿಂಗ್ ಮಾಲ್
ಮಾರುಕಟ್ಟೆ
ಇಂದು ಇದೆಲ್ಲಾ ಇರುತ್ತೆ?
ಆಸ್ಪತ್ರೆ
ಮೆಡಿಕಲ್ ಶಾಪ್
ಆಂಬ್ಯುಲೆನ್ಸ್
ತರಕಾರಿ
ಹಾಲಿನ ಬೂತ್
ಬ್ಯಾಂಕ್
ಪೆಟ್ರೋಲ್ ಬಂಕ್
ಎಪಿಎಂಸಿ
ಬ್ಯಾಂಕ್ಗಳು
ದಿನಪತ್ರಿಕೆಗಳು
ಮೆಟ್ರೊ, ರೈಲು
ಬೆಂಗಳೂರು, ಕೋಲಾರ, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ. ಬೇರೆಡೆಗೆ ರಜೆ ಘೋಷಿಸುವ ನಿರ್ಧಾರವನ್ನು ಬಿಇಓಗಳ ವಿವೇಚನೆಗೆ ಬಿಡಲಾಗಿದೆ. ಮಂಗಳೂರು ಉಡುಪಿ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳು ಎಂದಿನಂತೆ ನಡೆಯಲಿದೆ. ಇಲ್ಲಿ ಬಂದ್ ಗೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.
ಇನ್ನು ಕರ್ನಾಟಕ ಬಂದ್ಗೆ ಕನ್ನಡ ಚಿತ್ರರಂಗ ಸಂಪೂರ್ಣ ಬೆಂಬಲ ಘೋಷಿಸಿದ್ದು, ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಫಿಲಂ ಚೇಂಬರ್ನಿಂದ ಟೌನ್ಹಾಲ್ವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದ್ದು, ಶಿವಣ್ಣ ಇದರ ನೇತೃತ್ವ ವಹಿಸಿಕೊಳ್ಳಲಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ರ್ಯಾಲಿ ನಡೆಯಲಿದ್ದು, ಕನ್ನಡ ಚಿತ್ರರಂಗದ ಹಲವು ನಟರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.