ಬೆಂಗಳೂರು: ವಿದ್ಯುತ್ ದರ ಏರಿಕೆ ವಿರೋಧಿಸಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಇಂದು (ಜೂ.22) ರಾಜ್ಯಾದ್ಯಂತ ಮುಷ್ಕರ ನಡೆಸುವುದಾಗಿ ಘೋಷಿಸಿತ್ತು. ಅದರಂತೆ ಎಲ್ಲಾ ವ್ಯಾಪಾರ ಮತ್ತು ಉದ್ಯಮ ಸಂಸ್ಥೆಗಳಿಗೆ ಗುರುವಾರ ಕರ್ನಾಟಕ ಬಂದ್ ಗೆ ಕರೆ ಕೊಡಲಾಗಿದ್ದು, ಬೆಂಬಲ ಸೂಚಿಸುವಂತೆ ಕೇಳಲಾಗಿದೆ.ಜೊತೆಗೆ ಕರ್ನಾಟಕ ಬಂದ್ಗೆ ಸಿಪಿಎಂ ಕೂಡ ಬೆಂಬಲ ನೀಡಿದೆ.
ಇನ್ನು ಕರ್ನಾಟಕ ಬಂದ್ ಕುರಿತು ಕೆಸಿಸಿಐ ಅಧ್ಯಕ್ಷ ವಿನಯ್ ಜವಳಿ ಮಾತನಾಡಿ, ‘ಬಂದ್ ಕರೆ ಕೇವಲ ವ್ಯಾಪಾರ ಸಂಸ್ಥೆಗಳಿಗೆ ಮತ್ತು ಸ್ವಯಂಪ್ರೇರಿತವಾಗಿದೆ. ಅಗತ್ಯ ಸೇವೆಗಳಿಗೆ, ವಾಹನಗಳ ಸಂಚಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಒಂದು ದಿನದ ಬಂದ್ನಿಂದ ವ್ಯಾಪಾರ ಸಂಸ್ಥೆಗಳು ನಷ್ಟವನ್ನು ಅನುಭವಿಸುತ್ತವೆ. ಆದರೆ, ವಿದ್ಯುತ್ ದರದ ಹೆಚ್ಚಳದಿಂದ ಮುಂದೆ ಕೈಗಾರಿಕೆಗಳು ಉಳಿಯುವುದಿಲ್ಲ ಎಂದು ಹೇಳಿದರು. ವಿದ್ಯುತ್ ದರ ಏರಿಕೆ ಖಂಡಿಸಿ ಇಂದು ಧಾರವಾಡ, ಮೈಸೂರು, ಕಲಬುರಗಿ, ಕಾರವಾರದಲ್ಲಿ ಸ್ವಯಂ ಪ್ರೇರಿತವಾಗಿ ಬಂದ್ಗೆ ಉತ್ತಮ ಸ್ಪಂದನೆ ಸಿಕ್ಕಿದೆ.
ಇಂದು ರಾಜ್ಯದ ಗದಗ, ಬಿಜಾಪುರ, ರಾಣೆಬೆನ್ನೂರು, ರಾಯಚೂರು, ತಾಳಿಕೋಟಿ, ವಿಜಯನಗರ, ಮೈಸೂರು, ದಾವಣಗೆರೆ, ಕೊಪ್ಪಳ, ಬಾಗಲಕೋಟೆ, ಧಾರವಾಡ, ಶಿರಸಿ, ಕಾರವಾರ, ಬೀದರ್, ಶಿವಮೊಗ್ಗ, ಕೋಲಾರ, ಮಂಡ್ಯ, ಚಿಕ್ಕಮಂಗಳೂರು, ಯಾದಗಿರಿ, ಚಿತ್ರದುರ್ಗ, ಕಲ್ಯಾಣ್ ಕಾಮತಕ, ಹಾವೇರಿ, ಕಾಮತಕ ಜಿಲ್ಲಾ ಚೇಂಬರ್ಗಳು ಮತ್ತು ಇತರೆ ಉದ್ಯಮ ಸಂಘಗಳು ಬಂದ್ನಲ್ಲಿ ಪಾಲ್ಗೊಳ್ಳಲಿವೆ. ಆದರೆ, ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳು ಬಂದ್ ಕರೆಗೆ ಸ್ಪಂದಿಸಿಲ್ಲ.
ಇತ್ತ ಡಿಜಿ & ಐಜಿಪಿ ಅಲೋಕ್ ಮೋಹನ್ ನೇತೃತ್ವದಲ್ಲಿ ಬೆಳಗ್ಗೆ 11 ಗಂಟೆಗೆ ಹಿರಿಯ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ ನಡೆಯಲಿದೆ. ಬೆಂಗಳೂರು ನಗರ ಕಮಿಷನರ್ ಕಚೇರಿಯಲ್ಲಿ ಸಭೆ ನಡೆಯಲಿದ್ದು ಪೊಲೀಸ್ ಆಯುಕ್ತ ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತರು, ಬೆಂಗಳೂರಿನ ಎಲ್ಲ ವಿಭಾಗದ ಡಿಸಿಪಿಗಳು, IPS ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಫೇಕ್ ಸುದ್ದಿ ಹರಡಿಸುವವರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯಲಿದೆ.