ನವದೆಹಲಿ: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಈ ಮೂಲಕ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದೆ. ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ಬರ ಪರಿಹಾರಕ್ಕೆ ಕೇಂದ್ರ ಸರ್ಕಾರದ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರೀಂಕೋರ್ಟಿಗೆ ಹೋಗಿತ್ತು. ಇದೀಗ ರಾಜ್ಯಕ್ಕೆ ಕೇಂದ್ರ ಸರ್ಕಾರವು3,454 ಕೋಟಿ ರೂ. ಬರಿಪರಿಹಾರ ಘೋಷಣೆ ಮಾಡಿದೆ.
ಆರ್ಟಿಕಲ್ 32ರ ಅಡಿಯಲ್ಲಿ ಸಿದ್ದರಾಮಯ್ಯ ಸರ್ಕಾರ ರಿಟ್ ಅರ್ಜಿ ಸಲ್ಲಿಸಿತ್ತು. ಒಟ್ಟು 18,172 ಕೋಟಿ ಬರ ಪರಿಹಾರ ನೀಡಬೇಕು. ಅದರಲ್ಲಿ ಶೀಘ್ರವಾಗಿ 8,177 ಕೋಟಿ ಪರಿಹಾರ ನೀಡುವಂತೆ ಮನವಿ ಮಾಡಿದ್ದರು. ಅಲ್ಲದೆ 566 ಕೋಟಿ ರೂಪಾಯಿ ಕುಡಿಯುವ ನೀರಿಗೆ ಪರಿಹಾರ ನೀಡಿದರೆ, 363 ಕೋಟಿ ರೂಪಾಯಿ ಜಾನುವಾರುಗಳ ಸಂರಕ್ಷಣೆಗೆ ನೀಡುವಂತೆ ಮನವಿ ಸಲ್ಲಿಸಿದ್ದರು, ಆದರೆ ಇದೀಗ ರಾಜ್ಯಕ್ಕೆ ಕೇಂದ್ರ ಸರ್ಕಾರ 3,454 ಕೋಟಿ ರೂ. ಬರಪರಿಹಾರ ಘೋಷಣೆ ಮಾಡಿದೆ.