ದಾಖಲೆಯ 14ನೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಹಣಕಾಸು ಸಚಿವರಾಗಿ ದಾಖಲೆಯ 14ನೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯರ ಬಜೆಟ್‌ನ ದಿಕ್ಕುದಿಸೆಗಳ ಬಗ್ಗೆ ಸಾಕಷ್ಟು ನಿರೀಕ್ಷೆಗಳಿದ್ದು, ಹಲವು ಜನಪರ ಕಾರ್ಯಕ್ರಮದ ಜತೆಗೆ ರಾಜ್ಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್‌ನ್ನು ಮುಖ್ಯಮಂತ್ರಿಗಳು ಮಂಡಿಸುವರು ಎಂಬ ನಿರೀಕ್ಷೆಗಳಿವೆ. 2023-24ನೇ ಸಾಲಿನ ಬಜೆಟ್ ಗಾತ್ರ 3.35ಲಕ್ಷ ಕೋಟಿ ರೂಪಾಯಿ ದಾಟುವ ಅಂದಾಜು ಮಾಡಲಾಗಿದೆ.

ಈ ಕುರಿತು ಟ್ವೀಟ್​ ಮಾಡಿದ ಅವರು ರಾಜ್ಯದ ಜನರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ‘ನನ್ನ ಪ್ರೀತಿಯ ಕನ್ನಡಿಗ ಬಂಧುಗಳೇ, ಜನತೆಯೇ ನನ್ನ ಪಾಲಿನ ಜನಾರ್ಧನರು. ಕೆಲವೇ ಹೊತ್ತಿನಲ್ಲಿ ನನ್ನ ಹದಿನಾಲ್ಕನೇ ಬಜೆಟ್ ಮಂಡಿಸಲಿದ್ದೇನೆ. ನನ್ನ ಮತ್ತು ನನ್ನ ಸರ್ಕಾರದ  ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ. ಯಾರೂ ರಾಜಕೀಯ ಪ್ರೇರಿತ ಟೀಕೆ-ಟಿಪ್ಪಣಿಗಳಿಗೆ ಕಿವಿಗೊಡಬೇಡಿ. ನುಡಿದಂತೆಯೇ ನಡೆದಿದ್ದೇನೆ, ಮುಂದೆಯೂ ನಡೆಯುತ್ತೇನೆ” ಎಂದು ವಿಶ್ವಾಸ ನೀಡಿದ್ದಾರೆ.

ಮುಂದುವರೆದು ” ನನ್ನ ಹಿಂದಿನ ಎಲ್ಲ ಬಜೆಟ್​​ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ. ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನ ಮಾಡುತ್ತೇನೆ. ರಾಜ್ಯದ ಜನರ ನಂಬಿಕೆ-ವಿಶ್ವಾಸಗಳನ್ನು ಹುಸಿಗೊಳಿಸುವುದಿಲ್ಲ. ಇದು ನಾನು ನೀಡುವ ಅತ್ಯುನ್ನತ ಗ್ಯಾರಂಟಿ ಎಂದು ಟ್ವೀಟ್​​ ಮೂಲಕ ರಾಜ್ಯದ ಜನರಿಗೆ ಭರವಸೆ ನೀಡಿದ್ದಾರೆ.

ಈವರೆಗೆ 13 ಬಜೆಟ್‌ ಮಂಡಿಸಿದ್ದ ಹೆಗ್ಗಳಿಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರಲ್ಲಿದ್ದು, ಅದನ್ನು ಸಿದ್ದರಾಮಯ್ಯ ಮುರಿಯುತ್ತಿದ್ದಾರೆ. ಸಿದ್ದರಾಮಯ್ಯ ಡಿಸಿಎಂ, ಹಣ ಕಾಸು ಸಚಿವರಾಗಿ 1995-96ರಲ್ಲಿ ಮೊದಲ ಬಾರಿಗೆ ಬಜೆಟ್‌ ಮಂಡಿಸಿ ದ್ದರು. 2018-19ರಲ್ಲಿ ಮೊದಲ ಮುಖ್ಯಮಂತ್ರಿ ಅವಧಿಯ ಕೊನೆಯ ಹಾಗೂ 13ನೇ ಬಾರಿಯ ಆಯವ್ಯಯ ಮಂಡಿಸಿದ್ದರು.

Ashitha S

Recent Posts

ಪಡೀಲಿನಲ್ಲಿ ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯಕ್ಕೆ ಅಮಾಯಕ ವ್ಯಕ್ತಿ ಬಲಿ !

ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಅಮಾಯಕ ವ್ಯಕ್ತಿಯೊಬ್ಬರು ಪ್ರಾಣ…

8 seconds ago

ಮಾಜಿ ಸಚಿವ ಹೆಚ್​.ಡಿ ರೇವಣ್ಣಗೆ ಬಿಗ್ ರಿಲೀಫ್

ಮಾಜಿ ಸಚಿವ ಹೆಚ್​.ಡಿ ರೇವಣ್ಣ ಅವರಿಗೆ 42ನೇ ಎಸಿಎಂಎಂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಮಧ್ಯಂತರ ಜಾಮೀನು ಪಡೆದು ಹೊರಗಿದ್ದ…

21 mins ago

ಎಟಿಎಂ ನಲ್ಲಿ ಹಣ ತೆಗೆದುಕೊಡಿ ಎಂದ ರೈತನಿಗೆ ವಂಚಿಸಿದ ಅಪರಿಚಿತ

ಜಿಲ್ಲೆಯ ಹನೂರು ಪಟ್ಟಣದ ಎಟಿಎಂ ನಲ್ಲಿ ಹಣ ತೆಗೆದುಕೊಡಿ ಎಂದು ಕೇಳಿದ ರೈತನಿಗೆ ಕೀಡಿಗೇಡಿಯೋರ್ವ ವಂಚಿಸಿ ಹಣ ಲಪಾಟಿಸಿರುವ ಘಟನೆ…

23 mins ago

ಅಕ್ರಮ ಕಲ್ಲುಕೋರೆ : ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ಬೃಹತ್ ಪ್ರತಿಭಟನೆ

ಅಕ್ರಮ ಕಲ್ಲುಕೋರೆ ದಾಳಿ ನೆಪದಲ್ಲಿ ಬಿಜೆಪಿ ಯುವ ಮುಖಂಡನ ಬಂಧಸಿದ ಹಿನ್ನಲೆ, ಬೆಳ್ತಂಗಡಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯಲ್ಲಿ…

24 mins ago

ನಿರ್ಮಾಪಕ ನನಗೆ ಬೆದರಿಕೆ ಹಾಕುತ್ತಿದ್ದಾರೆ : ʻಹೆಡ್‌ಬುಷ್‌́ ನಟಿ ಗಂಭೀರ ಆರೋಪ

ಪಂಜಾಬಿ ಬ್ಯೂಟಿ ಪಾಯಲ್‌ ರಜಪೂತ್‌ ಅವರು ನಿರ್ಮಾಪಕರ ವಿರುದ್ಧ ಹೆಡ್‌ಬುಷ್‌ ನಟಿ ಬೆದರಿಕೆ ಹಾಕುತ್ತಿದ್ದಾರೆಂದು ಹೆಡ್‌ಬುಷ್‌ ನಟಿ ಆರೋಪಿಸುತ್ತಿದ್ದಾರೆ. RX…

2 hours ago

ಟಿಪ್ಪರ್- ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ…

2 hours ago