News Karnataka Kannada
Thursday, May 09 2024
ಕರ್ನಾಟಕ

ಮಾನವ-ಪ್ರಾಣಿ ಸಂಘರ್ಷ ನಿಯಂತ್ರಣಕ್ಕೆ ಮಾರ್ಗಸೂಚಿ ಹೊರಡಿಸಿದ ಹೈಕೋರ್ಟ್

karnataka-high-court
Photo Credit : By Author

ಬೆಂಗಳೂರು: ಮಾನವ-ಪ್ರಾಣಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್ ಮಾರ್ಗಸೂಚಿ ಹೊರಡಿಸಿದ್ದು, ಪ್ರತಿ ತಾಲ್ಲೂಕಿನಲ್ಲಿ ದೂರುಗಳನ್ನು ಸ್ವೀಕರಿಸಲು ದೂರುಗಳ ಸೆಲ್ ಸ್ಥಾಪಿಸಲು ನಿರ್ದೇಶಿಸಿದೆ.

ಕರ್ನಾಟಕ ಬೆಳೆಗಾರರ ಒಕ್ಕೂಟ ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡುವಾಗ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಾನವ-ಪ್ರಾಣಿ ಸಂಘರ್ಷವನ್ನು ತಡೆಗಟ್ಟಲು ಮತ್ತು ಅದರಿಂದ ಸಂತ್ರಸ್ತರಿಗೆ ಬೆಂಬಲ ನೀಡಲು ಹಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಪೈಕಿ, ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ವಿಭಾಗೀಯ ಪೀಠವು ಪ್ರತಿ ತಾಲ್ಲೂಕಿನಲ್ಲಿ ಕಾಡು ಪ್ರಾಣಿಗಳು ಮಾನವನ ಆವಾಸಸ್ಥಾನಕ್ಕೆ ನುಗ್ಗುವ ಬಗ್ಗೆ ದೂರುಗಳನ್ನು ಸ್ವೀಕರಿಸಲು ದೂರುಗಳ ಸೆಲ್ ಸ್ಥಾಪಿಸಲು ನಿರ್ದೇಶಿಸಿದೆ. ಕಾಡಾನೆಗಳ ಓಡಾಟಕ್ಕೆ ಆನೆ ಕಾರಿಡಾರ್‌ಗಳನ್ನು ಸ್ಥಾಪಿಸುವಂತೆಯೂ ಹೈಕೋರ್ಟ್‌ ಮಾರ್ಗಸೂಚಿಯಲ್ಲಿ ನಿರ್ದೇಶನ ನೀಡಿದೆ.

ಗಾಯಾಳುಗಳಿಗೆ ಚಿಕಿತ್ಸೆ ಒದಗಿಸಲು ಜಿಲ್ಲಾ ಆಸ್ಪತ್ರೆ ಕ್ರಮಕೈಗೊಳ್ಳಬೇಕು. ಜನರ ಅಹವಾಲು ಪರಿಹಾರ ಘಟಕ ಸ್ಥಾಪಿಸಬೇಕು. ಅರಣ್ಯ ಇಲಾಖೆಗೆ ಅಗತ್ಯ ಮಾನವ ಸಂಪನ್ಮೂಲ, ವಾಹನ ಒದಗಿಸಬೇಕು. ಅರಣ್ಯ ಪಡೆ ಮುಖ್ಯಸ್ಥರು, ವನ್ಯಜೀವಿ ಪರಿಪಾಲಕರು ವರ್ಷಕ್ಕೆ 4 ಬಾರಿ ಸಭೆ ನಡೆಸಬೇಕು. ತಾಲೂಕು ಮಟ್ಟದಲ್ಲಿ ದೂರು‌ಕೋಶ ಸ್ಥಾಪಿಸಿ ಮಾಹಿತಿ ಪಡೆಯಬೇಕು. ವಲಯ ಅರಣ್ಯ ಅಧಿಕಾರಿ, ತಹಶೀಲ್ದಾರ್ 2 ತಿಂಗಳಿಗೊಮ್ಮೆ ಸಭೆ ಸೇರಬೇಕು. 24/7 ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲು ಮತ್ತು ಕಾಡು ಪ್ರಾಣಿಗಳ ಬೆದರಿಕೆ ಇರುವ ಪ್ರದೇಶಗಳಲ್ಲಿ ಜನರಿಗೆ ಎಚ್ಚರಿಕೆ ಸಂದೇಶಗಳನ್ನು ದೊಡ್ಡ ಪ್ರಮಾಣದಲ್ಲಿ ಕಳುಹಿಸಬೇಕು. ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು