ಉಡುಪಿ: ಕೊಲ್ಲೂರು ಮೂಕಾಂಬಿಕ ದೇವಸ್ಥಾನದ ಆಡಳಿತ ಮಂಡಳಿಯ ಅವಧಿಯನ್ನು ವಿಸ್ತರಿಸುವಂತೆ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ನಿರಾಕರಿಸಿದ್ದು, ಈ ವಿಷಯದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೇಳಿದೆ.
೩ ವರ್ಷದ ಅವಧಿಗೆ ರಚನೆಯಾಗಿದ್ದ ಆಡಳಿತ ಮಂಡಳಿಯ ಸದಸ್ಯರು ತಮ್ಮ ಸಂಪೂರ್ಣ ಅಧಿಕಾರಾವಧಿಯನ್ನು ಅನುಭವಿಸಿರುವ ಕಾರಣ, ಸಮಿತಿ ರಚನೆಯ ಸಮಯದಲ್ಲಿ ಆದ ಒಪ್ಪಂದದ ಪ್ರಕಾರ ಅವಧಿಯನ್ನು ವಿಸ್ತರಿಸಲಾಗುವುದಿಲ್ಲ. ಇದು ಧಾರ್ಮಿಕ ದತ್ತಿ ಇಲಾಖೆ ಕಾಯ್ದೆಗೆ ವಿರುದ್ಧವಾಗುತ್ತದೆ ಎಂದು ಎಂ.ನಾಗಪ್ರಸನ್ನ ಅವರ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದೆ.
ಅಧಿಕಾರದ ಅವಧಿಯ ಕೊನೆ ಹಂತದಲ್ಲಿರುವಾಗ ಕೆರಾಡಿ ಚಂದ್ರಶೇಖರ ಶೆಟ್ಟಿ ಸೇರಿ 6 ಮಂದಿ ಅದನ್ನು ವಿಸ್ತರಿಸುವಂತೆ ಮನವಿ ಮಾಡಿದ್ದರು. ಅರ್ಜಿಯನ್ನು ಪರಿಶೀಲಿಸಿ ವಾದ – ಪ್ರತಿವಾದಗಳನ್ನು ಆಲಿಸಿದ ಕೋರ್ಟ್ ಹೀಗೆ ಹೇಳಿದೆ.