ಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ಗೇಟ್ ನೀರುಪಾಲಾಗಿತ್ತು. ಕೂಡಲೇ ಎಚ್ಚೆತ್ತ ಸರ್ಕಾರ, ಹೊಸ ಸ್ಟಾಪ್ಲ್ಯಾಗ್ ಗೇಟ್ ಅಳವಡಿಸಲು ಸೂಚಿಸಿತ್ತು. ಅದರಂತೆ ಡ್ಯಾಂ ತಜ್ಞ ಕನ್ನಯ್ಯ ನಾಯ್ಡು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ನೂರಾರು ಸಿಬ್ಬಂದಿ ಪ್ರಾಣವನ್ನೇ ಪಣಕ್ಕಿಟ್ಟು ಶ್ರಮಿಸಿ, ಮೂರನೇ ಎಲಿಮೆಂಟ್ನ್ನು ಯಶಸ್ವಿಯಾಗಿ ಅಳವಡಿಸಿದ್ದಾರೆ. ಈ ಮೂಲಕ ಹರಿಯುವ ನೀರನ್ನು ತಡೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಳೆದ ಆಗಸ್ಟ್ 10 ರಿಂದ ನಿರಂತರವಾಗಿ ನೀರು ಹರಿದು ವ್ಯರ್ಥವಾಗಿ ಹೋಗುತ್ತಿತ್ತು. ಕ್ರಸ್ಟಗೇಟ್ 19 ಕೊಚ್ಚಿಕೊಂಡು ಹೋಗಿದ್ದರಿಂದ ಅಪಾರ ಪ್ರಮಾಣದ ನೀರು ಹರಿದು ಹೋಗಿತ್ತು. ಇದೀಗ ಮೂರನೇ ಎಲಿಮೆಂಟ್ ಕೂಡ ಅಳವಡಿಕೆ ಮಾಡಲಾಗಿದ್ದು, ನೀರನ್ನು ಬಂದ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.