ಬೆಂಗಳೂರು: ರಾಜ್ಯಕ್ಕೆ ಸಮರ್ಪಕ ಮಳೆಯಾಗದೆ ಹಲವೆಡೆ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ೧೧ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಕುಸಿಯತೊಡಗಿದೆ. ಇದು ಮುಂಬರುವ ಬೇಸಿಗೆನ್ನು ಎದುರಿಸುವ ಬಗ್ಗೆ ರಾಜ್ಯದಲ್ಲಿ ಭಯ ಹುಟ್ಟಿಸುತ್ತಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ನೀಡಿರುವ ಮಾಹಿತಿಯ ಪ್ರಕಾರ ಕಾವೇರಿ ಮತ್ತು ಕೃಷ್ಣಾ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ಶೇ.೪೦ಕ್ಕಿಂತ ಕಡಿಮೆ ನೀರು ಶೀಖರಣೆಯಾಗಿದೆ. ಬೆಂಗಳೂರು ಮೈಸೂರು ಭಾಗಗಳಿಗೆ ಕುಡಿಯುವ ನೀರು ಪೂರೈಸುವ ಹಾರಂಗಿ, ಹೇಮಾವತಿ, ಕಬಿನಿ ಮತ್ತು KRS ನಂತಹ ೧೧೫ TMC ಸಾಮರ್ಥ್ಯದ ಜಲಾಶಯಗಳಲ್ಲಿ ೫೧ TMC ಮಾತ್ರ ನೀರಿದೆ.
ಭದ್ರಾ, ವಾಣಿ ವಿಲಾಸ, ತುಂಗಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ ಮತ್ತು ನಾರಾಯಣಪುರದ 422 ಟಿಎಂಸಿ ಸಾಮರ್ಥ್ಯದ ಜಲಾಶಯಗಳಲ್ಲಿ ಕೇವಲ 173 ಟಿಎಂಸಿ ನೀರಿದೆ.
ಬೇಸಿಗೆ ತೀವ್ರಗೊಂಡಂತೆ ನೀರಿನ ಮಟ್ಟ ಮತ್ತಷ್ಟು ಕುಸಿಯುವ ಸಾಧ್ಯತೆಯ ಬಗ್ಗೆ ಮಾತನಾಡಿದಗೆ KSNDMC ಅಧಿಕಾರಿಗಳು, ಬೇಸಿಗೆಯಲ್ಲಿ ಸರಾಸರಿ ಒಂದು ಟಿಎಂಸಿ ನೀರು ಕಾವೇರಿ ಮತ್ತು ಕೃಷ್ಣ ಜಲಾನಯನ ಪ್ರದೇಶಗಳಿಂದ ಆವಿಯಾಗುತ್ತದೆ ಎಂದಿದ್ದಾರೆ. ಇದು ಕುಡಿಯುವ ನೀರಿನ ಬಿಕ್ಕಟ್ಟಿಗೂ ಕಾರಣವಾಗಬಹುದಾದರೂ ಸಧ್ಯದ ಪರಿಸ್ಥಿತಿಯಲ್ಲಿ ನಗರದ ಅಗತ್ಯತೆಗಳನ್ನು ಪೂರೈಸಲು ತೊಂದರೆಯಿಲ್ಲ ಎಮದು ತಿಳಿಸಿದ್ದಾರೆ.
ಮುಂದಿನ ಮಾನ್ಸೂನ್ ಆಗಮನದವರೆಗೆ ಎಲ್ಲಾ ಪ್ರಾದೇಶಿಕ ಆಯುಕ್ತರು ತಮ್ಮ ವ್ಯಾಪ್ತಿಯಲ್ಲಿರುವ ಜಲಾಶಯಗಳಲ್ಲಿ ನೀರಿನ ಸಂಗ್ರಹವನ್ನು ಮೇಲ್ವಿಚಾರಣೆ ಮಾಡಲು ಮತ್ತು ಕುಡಿಯುವ ಉದ್ದೇಶಕ್ಕೆ ಪ್ರತ್ಯೇಕವಾಗಿ ನೀರನ್ನು ಬಳಸಿಕೊಳ್ಳಲು ಸೂಚಿಸಲಾಗಿದೆ ಎಂದು KSNDMCಯ ಸಲಹೆಗಾರ ಶ್ರೀನಿವಾಸ್ ರೆಡ್ಡಿ ಹೇಳಿದ್ದಾರೆ.