News Karnataka Kannada
Sunday, April 28 2024
ಹಾಸನ

ಕಾರಿನ ಮೇಲೆ ಕಾಡಾನೆ ಧಾಳಿ ; ಇಬ್ಬರು ಬಚಾವ್‌

Hassan Elephant 5 7 21
Photo Credit :

ಹಾಸನ: ಕಾರಿನಲ್ಲಿ ತೆರಳುತಿದ್ದಾಗ ಏಕಾಏಕಿ ಕಾಡಾನೆ ದಾಳಿ ಮಾಡಿದ ಹಿನ್ನೆಲೆಯಲ್ಲಿ ಕೂದಲೆಳೆ ಅಂತರದಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹಲಸುಲಿಗೆ ಗ್ರಾಮದ ಬಳಿ ಇಂತಹ ಒಂದು ಘಟನೆ ನಡೆದಿದ್ದು, ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಚೈತ್ರಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮಗನ ಜೊತೆ ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದರು. ಹಲಸುಲಿಗೆ ಗ್ರಾಮದ ಬಳಿ ಬಂದಾಗ ರಸ್ತೆ ದಾಟುತ್ತಿದ್ದ ಕಾಡಾನೆ ಕಾರನ್ನ ಕಂಡು ಏಕಾಏಕಿ ದಾಳಿ ನಡೆಸಿದೆ. ಕಾರಿನಿಂದ ಇಳಿದು ಓಡಿಹೋದ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಮುಂಭಾಗವನ್ನು ತನ್ನ ಸೊಂಡಿಲಿನಿಂದ ದಾಳಿ ನಡೆಸಿ ಜಖಂಗೊಳಿಸಿದೆ.
ಕಾಡಾನೆಯ ಅಟ್ಟಹಾಸಕ್ಕೆ ಮಲೆನಾಡಿಗರು ಬೆಚ್ಚಿಬಿದ್ದಿದ್ದು, ಪುಂಡಾನೆಯನ್ನು ಸ್ಥಳಾಂತರಿಸಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ. ಈಗಾಗಲೇ ಎರಡು ಪುಂಡಾನೆಗಳನ್ನು ಅರಣ್ಯ ಇಲಾಖೆ ಹಿಡಿದಿದ್ದು ಅವುಗಳಿಗೆ ರೇಡಿಯೋ ಕಾಲರ್ ಅಳವಡಿಸಲಾಗಿತ್ತು. ಆದರೆ ಈಗ ಮತ್ತೆ ಕಾಡಾನೆ ರಾಜ್ಯ ಹೆದ್ದಾರಿಗೆ ಕಾಲಿಡುತ್ತಿದ್ದು, ಮಲೆನಾಡಿಗರು ಓಡಾಡಲು ಭಯಪಡುವಂತಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು