News Karnataka Kannada
Monday, April 29 2024
ಮಲೆನಾಡು

ಕೌಟುಂಬಿಕ ಕಲಹ ; ತಂದೆಯಿಂದ ಮಗನ ಹತ್ಯೆ

Murder
Photo Credit :

ಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ ತಂದೆಯೇ ತನ್ನ ಮಗನನ್ನು ಗುಂಡಿಕ್ಕಿ ಕೊಲೆಗೈದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮದಲ್ಲಿ ನಡೆದಿದೆ. ಮತ ಮಗನನ್ನು ಕಿರಣ್(30) ಎಂದು ಗುರುತಿಸಲಾಗಿದೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮೇಲ್ನೋಟಕ್ಕೆ ಕೌಟುಂಬಿಕ ಕಲಹವೇ ಕೊಲೆಗೆ ಕಾರಣ ಎಂದು ತಿಳಿದು ಬಂದಿದೆ.
ಕುಟುಂಬದಲ್ಲಿ ಕೌಟುಂಬಿಕ ವಿಚಾರಕ್ಕೆ ಆಗಾಗ್ಗೆ ಸಣ್ಣ-ಪುಟ್ಟ ಗಲಾಟೆಗಳು ನಡೆಯುತ್ತಿದ್ದವು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಗೋಣಿಬೀಡು ಪೊಲೀಸರು ಆರೋಪಿ 72 ವರ್ಷದ ಲಕ್ಷ್ಮಣ ಗೌಡನನ್ನ ಬಂಧಿಸಿದ್ದಾರೆ. ಮೃತ ಕಿರಣ್ ಮೃತದೇಹದ ಮರಣೋತ್ತರ ಪರೀಕ್ಷೆ ಮೂಡಿಗೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಈ ಸಂಬಂಧ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು