ಶಿವಮೊಗ್ಗ: ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟಿçÃಯ ಹೆದ್ದಾರಿ 766(ಸಿ)ರಲ್ಲಿ ಬರುವ ನಗರ-ಚಿಕ್ಕಪೇಟೆ ಮಧ್ಯದಲ್ಲಿರುವ ಸೇತುವೆ ಕುಸಿದಿರುವುದರಿಂದ ಮತ್ತು ಶಿವಮೊಗ್ಗ ತೀರ್ಥಹಳ್ಳಿ ಸಂಪರ್ಕ ಕಲ್ಪಿಸುವ ರಾಷ್ಟಿçÃಯ ಹೆದ್ದಾರಿ 169 ರಲ್ಲಿ ವಿಹಂಗಮ ನರ್ಸರಿ ತಿರುವಿನಿಂದ ಭಾರತಿಪುರ ತಿರುವಿನವರೆಗೆ ರಸ್ತೆ ಕುಸಿದಿರುವುದರಿಂದ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಪರ್ಯಾಯ ಮಾರ್ಗಗಳಲ್ಲಿ ಸಂಚಾರಕ್ಕೆ ಜಿಲ್ಲಾಧಿಕಾರಿಗಳು ತಾತ್ಕಾಲಿಕ ಆದೇಶ ಹೊರಡಿಸಿದ್ದಾರೆ.
ಪರ್ಯಾಯ ಮಾರ್ಗಗಳ ವಿವರ
1 ಶಿವಮೊಗ್ಗ ಮಾರ್ಗದಿಂದ ಕುಂದಾಪುರ ಮತ್ತು ಕುಂದಾಪುರದಿ0ದ-ಶಿವಮೊಗ್ಗಕ್ಕೆ ಸಂಚರಿಸುವ ಭಾರೀ ವಾಹನಗಳು ಶಿವಮೊಗ್ಗ-ಸಾಗರ-ಹೊನ್ನಾವರ(ಎನ್ಹೆಚ್69) ಮಾರ್ಗದಲ್ಲಿ ಸಂಚರಿಸುವುದು.
2 ಶಿವಮೊಗ್ಗದಿಂದ ಉಡುಪಿ-ಮಂಗಳೂರು ಮತ್ತು ಮಂಗಳೂರಿನಿ0ದ ಉಡುಪಿ ಶಿವಮೊಗ್ಗಕ್ಕೆ ಸಂಚರಿಸುವ ಭಾರೀ ವಾಹನಗಳು ಶಿವಮೊಗ್ಗ-ಕೊಪ್ಪ-ಕಾರ್ಕಳ-ಮಂಗಳೂರು(ಎನ್ಹೆಚ್ 57, 65 ಮತ್ತು ಎನ್ಹೆಚ್169ರಲ್ಲಿ) ಮಾರ್ಗದಲ್ಲಿ ಸಂಚರಿಸುವುದು.
3 ಶಿವಮೊಗ್ಗದಿಂದ ಕುಂದಾಪುರಕ್ಕೆ ಸಂಚರಿಸುವ ಭಾರೀ ವಾಹನಗಳು ಶಿವಮೊಗ್ಗ-ಹೊಸನಗರ-ಹುಲಿಕಲ್ ಘಾಟ್-ಸಿದ್ದಾಪುರ-ಕುಂದಾಪುರ ಮಾರ್ಗದಲ್ಲಿ ಸಂಚರಿಸುವುದು.
4 ಶಿವಮೊಗ್ಗದಿಂದ ಮಂಗಳೂರಿಗೆ ಸಂಚರಿಸುವ ಭಾರೀ ವಾಹನಗಳು ಶಿವಮೊಗ್ಗ-ನರಸಿಂಹರಾಜಪುರ-ಕೊಪ್ಪ-ಶೃ0ಗೇರಿ-ಕಾರ್ಕಳ-ಮ0ಗಳೂರು
ಕುಸಿದಿರುವ ಸೇತುವೆ ಮತ್ತು ರಸ್ತೆ ದುರಸ್ತಿ ಆಗುವವರೆಗೆ ಅಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಮೇಲ್ಕಂಡ ಪರ್ಯಾಯ ಮಾರ್ಗಗಳಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರ ವ್ಯವಸ್ಥೆಗೊಳಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ.