17 ದಿನಗಳ ಅಂತರದಲ್ಲೇ ವರದಕ್ಷಿಣೆ ಸಾವಿಗೀಡಾದ ಇಬ್ಬರು ಅಕ್ಕ ತಂಗಿಯರು

ಹಾಸನ: ಒಂದೇ ಕುಟುಂಬದ ಇಬ್ಬರು ಅಕ್ಕ ತಂಗಿಯರು 17 ದಿನದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯಿಂದ ವರದಿ ಆಗಿದೆ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕಿನ, ಬೆಳಗೊಂಡ್ಲು ಗ್ರಾಮದ ಕಾಫಿ ತೋಟದ ಕಾರ್ವಿುಕರಾದ ಉದಯ್ ಮತ್ತು ಅನಿತಾ ದಂಪತಿಗೆ ನಾಲ್ವರು ಹೆಣ್ಣು ಮಕ್ಕಳು. ಈ ಪೈಕಿ ಸೌಂದರ್ಯ ಮೊದಲ ಮಗಳು. ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದು, ತನ್ನ ಕಾಲ ಮೇಲೆ ತಾನು ನಿಲ್ಲಬೇಕು ಎಂದು ಮದುವೆಯಾಗಲು ನಿರಾಕರಿಸಿದ್ದಳು. ಬಳಿಕ ಈಕೆಯ ತಂಗಿ ಐಶ್ವರ್ಯಾಗೆ ಕಳೆದ ವರ್ಷ ತುಮಕೂರು ಜಿಲ್ಲೆ, ಕುಣಿಗಲ್ ತಾಲೂ

 

ಕಿನ ಕಾವೇರಿಪುರದ ನಿವಾಸಿ ನಾಗರಾಜು ಜೊತೆ ಮದುವೆ ಮಾಡಲಾಗಿತ್ತು. ನಾಗರಾಜು ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ. ದಂಪತಿ ಇಬ್ಬರೂ ತುಮಕೂರು ನಗರದ ಸರಸ್ವತಿಪುರಂನಲ್ಲಿ ವಾಸಿಸುತ್ತಿದ್ದರು.
ಇನ್ನಿಬ್ಬರು ಮಕ್ಕಳು ಪಿಯುಸಿ, ಎಸ್​ಎಸ್​ಎಲ್​ಸಿ ಓದುತ್ತಿದ್ದಾರೆ. ನನಗೆ ಮದುವೆ ಬೇಡ ಎಂದಿದ್ದ ಹಿರಿಯ ಮಗಳು ಸೌಂದರ್ಯ ಫೇಸ್​ಬುಕ್​ನಲ್ಲಿ ಪರಿಚಯವಾದ ಹೊಸನಗರ ತಾಲೂಕಿನ ಕರಿಮನೆ ಗ್ರಾ.ಪಂ. ವ್ಯಾಪ್ತಿಯ ಕಾಡಿಗ್ಗೇರಿ ಉಮೇಶ್ ಜೊತೆ ಗೆಳೆತನ ಶುರುವಾಗಿ ನಂತರ ಪ್ರೇಮಾಂಕುರವಾಗಿ ಉಮೇಶ್ ನನ್ನು ಮದುವೆಯಾಗಲು ನಿರ್ಧರಿಸಿದ್ದಳು. ಈ ವಿಷಯವನ್ನು ಮನೆಯಲ್ಲಿ ಪ್ರಸ್ತಾಪ ಮಾಡಿದ್ದು, ಬೇರೆ ಬೇರೆ ಜಾತಿ ಎನ್ನುವ ಕಾರಣಕ್ಕೆ ಮನೆಯವರು ಮದುವೆಗೆ ಒಪ್ಪಿರಲಿಲ್ಲ. ಪೋಷಕರ ವಿರೋಧದ ನಡುವೆಯೂ ಸೌಂದರ್ಯಾ ಮತ್ತು ಉಮೇಶ್​ ಇಬ್ಬರೂ 2020 ರ ನವೆಂಬರ್​ನಲ್ಲಿ ಮದುವೆಯಾಗಿದ್ದರು. ಇದು ತಿಳಿಯುತ್ತಿದ್ದಂತೆ ಎಲ್ಲಾದರೂ ಇರು, ಚೆನ್ನಾಗಿರು ಎಂದು ಹೇಳಿ ಆಕೆಯ ಪೋಷಕರು ಸುಮ್ಮನಾಗಿದ್ದರು. ಸೌಂದರ್ಯ ತನ್ನ ಗಂಡನ ಮನೆ ಕಾಡಿಗ್ಗೇರಿಯಲ್ಲೇ ಇದ್ದಳು.
2021ರ ಜೂ.8 ರಂದು ಗಂಡನ ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಐಶ್ವರ್ಯಳ ಶವ ಪತ್ತೆಯಾಗಿತ್ತು. ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ಕೊಡುತ್ತಿದ್ದರು. ಐಶ್ವರ್ಯಳನ್ನು ಆಕೆಯ ಗಂಡನೇ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಮೃತಳ ಪೋಷಕರು ಮಹಿಳಾ ಠಾಣೆಯಲ್ಲಿ‌ ದೂರು ನೀಡಿದ್ದರು. ಜೂ.10 ರಂದು ಐಶ್ವರ್ಯಳ ಅಂತ್ಯಕ್ರಿಯೆಗೆ ಅಕ್ಕ ಸೌಂದರ್ಯ ತನ್ನ ಗಂಡನೊಂದಿಗೆ ಬಂದು ಹೋಗಿದ್ದಳು. ಇದಾದ 17 ದಿನಕ್ಕೆ,‌‌ಅಂದರೆ ಜೂ.25 ರಂದು ಸೌಂದರ್ಯ ಕೂಡ ತನ್ನ ಗಂಡನ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೃತಳ ತಂದೆ ತಾಯಿ ಕುಸಿದು ಬಿದ್ದಿದ್ದಾರೆ. ಮಗಳ ಸಾವಿನಿಂದ ಆಕ್ರೋಶಗೊಂಡ ಆಕೆಯ ಪಾಲಕರು ಉಮೇಶನ ಮನೆ ಬಳಿಯೇ ಸೌಂದರ್ಯ ಅಂತ್ಯಕ್ರಿಯೆ ನಡೆಸಲು ಮುಂದಾ

 

ಗಿ ಸೂಕ್ತ ರಕ್ಷಣೆ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದರು. ಆದರೆ ಪೊಲೀಸರು ಅದಕ್ಕೆ ಅವಕಾಶ ನೀಡಲಿಲ್ಲ. ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿ ನಂತರ ಫ್ಯಾನ್ ​ಗೆ ನೇಣು ಹಾಕಿದ್ದಾರೆ ಎಂದು ಮೃತಳ ತಂದೆ ಉದಯ್ ಆರೋಪಿಸಿದ್ದು, ಮಗಳ ಸಾವಿಗೆ ಅಳಿಯ ಉಮೇಶ್, ಆತನ ತಂದೆ ಪಾಂಡುರಂಗ, ತಾಯಿ ಶಾಂತಮ್ಮ, ಸಹೋದರಿ ರೂಪಾ ಕಾರಣ. ಬೇರೆ ಜಾತಿ ಎಂಬ ಕಾರಣಕ್ಕೆ ನನ್ನ ಮಗಳಿಗೆ ಹಿಂಸೆ ನೀಡಿದ್ದಾರೆ. ಅಲ್ಲದೆ ಉಮೇಶನಿಗೆ ಬೇರೊಂದು ಮದುವೆ ಮಾಡಲು ನಿರ್ಧರಿಸಿದ್ದರು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.
ಕೂಲಿ ಕೆಲಸ ಮಾಡಿ ತಮ್ಮ ಹೊಟ್ಟೆ ಬಟ್ಟೆ ಕಟ್ಟಿ ನಾಲ್ಕು ಹೆಣ್ಣುಮಕ್ಕಳನ್ನು ಸಾಕಿ ಸಲುಹಿದ್ದರು. ತಾವೇ ನೋಡಿ ಮದುವೆ ಮಾಡಿದ ಎರಡನೇ ಮಗಳು ಐಶ್ವರ್ಯ, ಮದುವೆ ಬೇಡವೆಂದು ಹೇಳಿ ಪ್ರೀತಿಸಿ ಮದುವೆಯಾಗಿದ್ದ ಸೌಂದರ್ಯ ಗಂಡನ ಮನೆಯಲ್ಲಿ ಸುಖವಾಗಿ ಬಾಳಿ ಬದುಕುತ್ತಾರೆ ಎಂದು‌ ಕನಸು ಕಂಡಿದ್ದರು. ಆದರೆ ಒಂದೇ ತಿಂಗಳಲ್ಲಿ ಇಬ್ಬರು ದುರಂತ ಅಂತ್ಯಕಂಡಿದ್ದು, ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.

Indresh KC

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

5 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

5 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

5 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

5 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

7 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

7 hours ago