ಬೆಂಗಳೂರು ; ಕಾಫಿ ತೋಟದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಕಾಲು ಜಾರಿ ಮೃತಪಟ್ಟಿದ್ದ ಕೂಲಿಯೊಬ್ಬನ ಕುಟುಂಬಕ್ಕೆ ಪರಿಹಾರ ಪಾವತಿಸುವಂತೆ ಚಿಕ್ಕಮಗಳೂರಿನ ಕಾರ್ವಿುಕ ಆಯುಕ್ತರು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕಾಫಿ ಎಸ್ಟೇಟ್ ಮಾಲೀಕ ಎನ್.ಎಲ್. ಪುಣ್ಯಮೂರ್ತಿ ಹಾಗೂ ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಇತ್ತೀಚೆಗೆ ಪ್ರಕಟಿಸಿರುವ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರಿದ್ದ ಪೀಠ, ಕೆಲಸಕ್ಕೆ ತೆರಳುವ ವೇಳೆ ಕಾರ್ವಿುಕ ಮೃತಪಟ್ಟರೂ ಆತನ ವಾರಸುದಾರರು ಪರಿಹಾರಕ್ಕೆ ಅರ್ಹರಾಗಿರುತ್ತಾರೆ ಎಂದು ಆದೇಶಿಸಿದೆ.
ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಸುಭಾಷನಗರದ ನಿವಾಸಿ ಸ್ವಾಮಿಗೌಡ, 2006ರ ಜು. 12ರಂದು ಕೊಳ್ಳಿಬೈಲು ಗ್ರಾಮದಲ್ಲಿದ್ದ ಪುಣ್ಯಮೂರ್ತಿಯ ಕಾಫಿ ತೋಟಕ್ಕೆ ಕೂಲಿ ಕೆಲಸಕ್ಕಾಗಿ ತೆರಳುತ್ತಿದ್ದಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದ. ಮೃತನ ಕುಟುಂಬ ಪರಿಹಾರ ಕೋರಿ ಕಾರ್ವಿುಕ ಆಯುಕ್ತರಿಗೆ ಅರ್ಜಿ ಸಲ್ಲಿಸಿತ್ತು. ಆಯುಕ್ತರು, ಸ್ವಾಮಿಗೌಡ ಕುಟುಂಬಕ್ಕೆ ಕಾಫಿ ತೋಟದ ಮಾಲೀಕ 75,032 ರೂ. ಹಾಗೂ ವಿಮಾ ಸಂಸ್ಥೆ 1,01,196 ರೂ. ಸೇರಿ ಒಟ್ಟು 1,76,328 ರೂ. ಪರಿಹಾರ ಕೊಡಬೇಕೆಂದು ಘೊಷಿಸಿ 2010ರ ಅ.28ರಂದು ಆದೇಶಿಸಿ ದ್ದರು. ಪರಿಹಾರದ ಮೊತ್ತಕ್ಕೆ 2006ರ ಆ.13ರಿಂದ ವಾರ್ಷಿಕ ಶೇ.7.5 ಬಡ್ಡಿದರ ಪಾವತಿಸುವಂತೆ ಆದೇಶಿಸಿತ್ತು. ಇದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗಿತ್ತು.
ಕೆಲಸಕ್ಕೆ ತೆರಳುತಿದ್ದಾಗ ಮೃತಪಟ್ಟರೂ ಪರಿಹಾರ ನೀಡಲೇಬೇಕು ಎಂದ ಹೈ ಕೋರ್ಟ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.