ಚಿಕ್ಕಮಗಳೂರು: ಕೊಪ್ಪದ ಸರ್ಕಾರಿ ಆಸ್ಪತ್ರೆಯ ಸ್ವಚ್ಛತೆ ಬಗ್ಗೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮೆಚ್ಚುಗೆ ವ್ಯಕ್ತಪಡಿಸಿದರು.
ಆಸ್ಪತ್ರೆಗೆ ಭೇಟಿದ್ದ ಅವರು, ಲಕ್ಷ್ಯಾ ಕಾರ್ಯಕ್ರಮದಡಿ ನವೀಕರಿಸಿದ ಹೆರಿಗೆ ಕೊಠಡಿ, ಸ್ವಚ್ಚತೆ ಬಗ್ಗೆ ಅವರು ಪರಿಶೀಲಿಸಿದರು. ಆಕ್ಸಿಜನ್ ಪ್ಲಾಂಟ್ ನಿರ್ಮಾಣದ ಕಾಮಗಾರಿ ವೀಕ್ಷಿಸಿದ ಅವರು, ಆಸ್ಪತ್ರೆಯ ಹಿಂಭಾಗದಲ್ಲಿ ಹೊಸದಾಗಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣ ಆಗಬೇಕಾಗಿರುವ ಬಗ್ಗೆ ಸ್ಥಳ ಪರಿಶೀಲಿಸಿ ಇಲ್ಲಿಗೆ ಅವಶಕ್ಯತೆ ಇರುವ ಅರಿವಳಿಕೆ ತಜ್ಞರನ್ನು ಆದ್ಯತೆ ಮೇಲೆ ನೇಮಿಸಲು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ಆಸ್ಪತ್ರೆಯ ಸುತ್ತ ಇರುವ ಜಾಗದಲ್ಲಿ ಗಾರ್ಡನ್ ಅಭಿವೃದ್ಧಿ ಪಡಿಸುವ ಬಗ್ಗೆ ಪರಿಶೀಲಿಸಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಎನ್ಆರ್ಇಜಿ ಯೋಜನೆಯಡಿ ಅವಕಾಶವಿದ್ದಲ್ಲಿ ಕ್ರಮ ಕೈಗೊಳ್ಳಲು ಸೂಚಿಸಿದರು. ಈ ಸಂದರ್ಭದಲ್ಲಿ ಡಾ.ಗಾನವಿ, ಡಾ. ಸಂದೀಪ್ ಕುಮಾರ್ ಹಾಗೂ ಆಸ್ಪತ್ರೆಯ ಆಡಳಿತಾಧಿಕಾರಿಗಳು ಹಾಜರಿದ್ದರು.