ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಜೀವನ್ ಜ್ಯೋತಿ ಖಾಸಗಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸೇರಿ 11 ಮಂದಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈಗಾಗಲೇ ಜಿಲ್ಲೆಯ ನವೋದಯ ವಸತಿ ಶಾಲೆಯ 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೋನಾ ಶಾಕ್ ನೀಡಿದ ಬೆನ್ನಲ್ಲೇ, ಇದೀಗ ಜಿಲ್ಲೆಯ ಮತ್ತೊಂದು ಖಾಸಗಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಸೇರಿ 11 ಮಂದಿಗೆ ಕೊರೋನಾ ಶಾಕ್ ನೀಡಿದೆ.
ಹೀಗಾಗಿ ಶಾಲೆಯನ್ನು ಒಂದು ವಾರ ಸೀಲ್ ಡೌನ್ ಮಾಡಲಾಗಿದೆ.
ಖಾಸಗಿ ಶಾಲೆಯ 11 ವಿದ್ಯಾರ್ಥಿಗಳಿಗೆ ಕೊರೋನಾ ದೃಢಪಟ್ಟ ಕಾರಣ, ಶಾಲೆಯನ್ನು ಒಂದು ವಾರಗಳ ಕಾಲ ಸೀಲ್ ಡೌನ್ ಮಾಡುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಮನೆಯಲ್ಲೇ ಹೋಂ ಐಸೋಲೇಷನ್ ನಲ್ಲಿ ಇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ.