News Karnataka Kannada
Sunday, April 28 2024
ಚಿಕಮಗಳೂರು

ಚಿಕ್ಕಮಗಳೂರು: ಚಿಲ್ಲರೆ ಹಣಕ್ಕಾಗಿ ಬಾರ್ ಕ್ಯಾಶಿಯರ್ ಕೊಲೆ

Murder
Photo Credit :

ಚಿಕ್ಕಮಗಳೂರು : ಚಿಲ್ಲರೆ ಹಣಕ್ಕಾಗಿ ನಡೆದ ಗಲಾಟೆ ಬಾರ್ ಕ್ಯಾಶಿಯರ್ ನ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ.

ಬಾರ್ ಕ್ಯಾಶಿಯರ್ ಯಶ್‍ಪಾಲ್ (28 ವ) ಮೃತ ದುರ್ದೈವಿ. ಪ್ರವಾಸಕ್ಕೆಂದು ಬಂದಿದ್ದ ಯುವಕರ ಜೊತೆಗಿನ ಗಲಾಟೆಯಲ್ಲಿ ಎದೆಗೆ ಪೆಟ್ಟುಬಿದ್ದು ಯಶ್ ಪಾಲ್ ಸಾವನ್ನಪ್ಪಿದ್ದಾರೆ. ಪ್ರವಾಸಿತಾಣ ಅಯ್ಯನಕೆರೆಗೆ ಹೋಗಿ ಬಂದ ಆರು ಜನ ಯುವಕರ ತಂಡ ಬಿಯರ್ ಖರೀದಿಗೆ ಬಂದಿತ್ತು. ಈ ವೇಳೆ ಚಿಲ್ಲರೆ ಹಣಕ್ಕಾಗಿ ಯಶ್‍ಪಾಲ್ ಜೊತೆ ಯುವಕರ ತಂಡ ಕಿರಿಕ್ ಮಾಡಿಕೊಂಡಿದೆ. ವೈನ್ಸ್ ಮುಂದೆ ರಸ್ತೆಗೆ ಬೈಕ್ ಅಡ್ಡಲಾಗಿ ನಿಲ್ಲಿಸಿದ ಯುವಕರು ಗಲಾಟೆ ಮಾಡಿದ್ದಾರೆ.

ಇದನ್ನು ಪ್ರಶ್ನಿಸಿದ ಯಶ್‍ಪಾಲ್ ಎದೆಗೆ ಯುವಕರ ಗುಂಪಿನ ಓರ್ವ ಯುವಕ ಬಲವಾಗಿ ಹೊಡೆದಿದ್ದಾರೆ. ಚಿಕಿತ್ಸೆಗಾಗಿ ಯಶ್‍ಪಾಲ್ ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ತೆರಳುವಾಗ ಮಾರ್ಗ ಮಧ್ಯೆ ಯಶ್ ಪಾಲ್ ಸಾವನ್ನಪ್ಪಿದ್ದಾರೆ.

ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು