ಚಿಕ್ಕಮಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮತ್ತೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಚಿಕ್ಕಮಗಳೂರಿನ ಜವಾಹರ್ ನವೋದಯ ವಸತಿ ಶಾಲೆಯ 40 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಸದ್ಯ ಕೊರೊನಾ ಸೋಂಕು ಪತ್ತೆಯಾಗಿರುವ 40 ವಿದ್ಯಾರ್ಥಿಗಳಿಗೆ ಸೋಂಕಿನ ಲಕ್ಷಣಗಳಿಲ್ಲ.
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಸಿಗೋಡ ಗ್ರಾಮದ ಬಳಿಯಿರುವ ಜವಾಹರ್ ನವೋದಯ ಶಾಲೆಯ ಮೂವರು ವಿದ್ಯಾರ್ಥಿಗಳು, ನಾಲ್ವರು ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಶಾಲೆಯ 418 ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 40 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ವಸತಿ ಶಾಲೆಯನ್ನು ಕ್ವಾರಂಟೈನ್ ಮಾಡಲಾಗಿದ್ದು, ವಸತಿ ಶಾಲೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.