ಚಿಕ್ಕಮಗಳೂರು: ಮೆಣಸೆ ಹೆಲಿಪ್ಯಾಡ್ಗೆ ಹೆಲಿಕ್ಯಾಪ್ಟರ್ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮಿಸಿದ್ದಾರೆ. ಕುಟುಂಬ ಸಮೇತರಾಗಿ ಶೃಂಗೇರಿ ಶಾರದಾಂಬೆ ದೇವಾಲಯ ಪ್ರವೇಶ ಮಾಡಿದ್ದಾರೆ. ಮಠದ ವತಿಯಿಂದ ರಾಷ್ಟ್ರಪತಿಗಳಿಗೆ ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಗಿದೆ. ಆನೆ, ಅಶ್ವ, ಕುಂಭದೊಂದಿಗೆ ರಾಷ್ಟ್ರಪತಿ ಕೋವಿಂದ್ ಅವರಿಗೆ ಸ್ವಾಗತಿಸಲಾಗಿದೆ. ಶಾರದಾಂಬೆಯ ದರ್ಶನ ಬಳಿಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವತ್ರಯರ ಆಶೀರ್ವಾದ ಪಡೆಯಲಿದ್ದಾರೆ. ಆ ಬಳಿಕ ನವರಾತ್ರಿ ಉತ್ಸವದಲ್ಲಿ ಕುಟುಂಬ ಸಮೇತರಾಗಿ ರಾಷ್ಟ್ರಪತಿ ಭಾಗಿಯಾಗಲಿದ್ದಾರೆ. ಸಂಜೆ ನಾಲ್ಕು ಗಂಟೆವರೆಗೂ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಗಿಯಾಗಲಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಂಗಳೂರಿನಿಂದ ಶೃಂಗೇರಿಗೆ ತೆರಳಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ನಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದತ್ತ ಕೋವಿಂದ್ ತೆರಳಿದ್ದಾರೆ. ಏರ್ಪೋರ್ಟ್ನಿಂದ ಹೆಲಿಕಾಪ್ಟರ್ನಲ್ಲಿ ಶೃಂಗೇರಿಯತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಯಾಣಿಸಲಿದ್ದಾರೆ. ನಿನ್ನೆ ರಾತ್ರಿ ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ರಾಷ್ಟ್ರಪತಿ ವಾಸ್ತವ್ಯ ಹೂಡಿದ್ದರು. ಇಂದು ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆ ದರ್ಶನ ಪಡೆಯಲಿದ್ದಾರೆ.