News Karnataka Kannada
Saturday, April 27 2024
ಚಿಕಮಗಳೂರು

ಶ್ರೀಗಂಧದ ಮರಗಳನ್ನು ಕಳವು ಮಾಡುತ್ತಿದ್ದ ಓರ್ವ ಆರೋಪಿಯ ಬಂಧನ

Arres Terrorist 12072021
Photo Credit :

ಚಿಕ್ಕಮಗಳೂರು: ಶ್ರೀಗಂಧದ ಮರಗಳನ್ನು ಕಳವು ಮಾಡುತ್ತಿದ್ದ ಓರ್ವ ಆರೋಪಿಯನ್ನು ಅರಣ್ಯ ಸಿಬ್ಬಂದಿ ಬಂಧಿಸಿ 20 ಕೆ.ಜಿ.ಯಷ್ಟು ಗಂಧವನ್ನು ವಶಪಡಿಸಿಕೊಂಡಿದ್ದಾರೆ. 3 ಮಂದಿ ತಪ್ಪಿಸಿಕೊಂಡಿದ್ದಾರೆ.

ತಾಲೂಕಿನ ಕಮೇನಹಳ್ಳಿ ಅರಣ್ಯ ಪ್ರದೇಶದಲ್ಲಿ ರಾತ್ರಿ ಬೀಡು ಬಿಟ್ಟಿದ್ದ ಸಿಬ್ಬಂಧಿ ಶ್ರೀಗಂಧ ಮರಗಳ ಕಡಿದು ಗಂಧ ತೆಗೆಯುವ ವೇಳೆ ಕಾರ್ಯಾಚರಣೆ ನಡೆಸಿದ್ದು, ತಮಿಳುನಾಡು ಮೂಲದ ರಮೇಶ ಎಂಬಾತನನ್ನು ಬಂಧಿಸಿದ್ದಾರೆ.

ಇನ್ನೂ 3 ಜನ ಶ್ರೀಗಂಧ ಚೋರರು ಅರಣ್ಯದಲ್ಲಿ ತಪ್ಪಿಸಿಕೊಂಡಿದ್ದಾರೆ. ತಮಿಳುನಾಡು, ಆಂಧ್ರ ಪ್ರದೇಶ ಮೂಲದ ಶ್ರೀಗಂಧ ಕಳ್ಳ ಸಾಗಣೆ ತಂಡವು ಚುರ್ಚೆ ಗುಡ್ಡ, ಕಾಮೇನಹಳ್ಳಿ ಅರಣ್ಯ ಪ್ರದೇಶದ ಶ್ರೀಗಂಧ ಮರಗಳ ಮೇಲೆ ಕಣ್ಣು ಹಾಕಿ ವ್ಯವಸ್ಥಿತ ಶ್ರೀಗಂಧ ಕಳ್ಳಸಾಗಣೆ ಯಲ್ಲಿ ತೊಡಗಿವೆ ಎಂದು ಹೇಳಲಾಗುತ್ತಿದೆ.

ಈ ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಸ್ವಾತಿ, ಸಿಬ್ಬಂದಿಗಳಾದ ವಸಂತ, ನಂದೀಶ್, ಸುನಿಲ್, ಮೊಹಮ್ಮದ್ ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು