ಚಿಕ್ಕಮಗಳೂರು : ‘ಹುಬ್ಬಳ್ಳಿ ಯಲ್ಲಿ ಗಲಾಟೆ ಮಾಡಿದವರು ಯಾರೂ ಅಮಾಯಕರಲ್ಲ, ಅವರ ವಿರುದ್ಧ ಗೂಂಡಾ ಕಾಯಿದೆ ಅಡಿಯಲ್ಲಿ ಕೇಸ್ ದಾಖಲಿಸಬೇಕು’ ಎಂದು ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.
ಬಾಳೆಹೊನ್ನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇದು ಪೂರ್ವ ಯೋಜಿತ ಕಾರ್ಯಕ್ರಮ.ಬಸವರಾಜ್ ಬೊಮ್ಮಾಯಿ ಅವರೇ ಯೋಗಿ ತರಹ ಮೈ ಕೊಡವಿ ನಿಲ್ಲಿ. ಯಾರು ಅಮಾಯಕರಲ್ಲ ಎಲ್ಲರೂ ಗುಂಡಾಗಳೇ. ಅಲ್ಲಿನ ಶಾಸಕ ಪ್ರಸಾದ್ ಅಬ್ಬಯ್ಯ ಅವರು ಹೊಣೆಗಾರರು. ಮುಸ್ಲಿಂ ಸಮಾಜ ಹತಾಶವಾಗಿದ್ದು, ಅಪಹಾಸ್ಯ ಒಳಗಾಗುತ್ತಿದ್ದಾರೆ.ಅಕ್ರೋಶ ಗಲಾಟೆಗೆ ಕಾರಣವಾ ಗುತ್ತಿದೆ. ಮೌಲಿಗಳು ಇಂತರವನ್ನು ಹದ್ದುಬಸ್ತಿನಲ್ಲಿ ಇಡಬೇಕು’ ಎಂದು ಆಗ್ರಹಿಸಿದರು.
‘ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್ ನವರು ಮುಸ್ಲಿಮರನ್ನ ಯಾವಾಗಲು ಅಮಾಯಕ ರೆಂದು ಹೇಳುತ್ತಾರೆ. ಅಮಾಯಕರು ಎನ್ನುವುದೇ ಒಂದು ಸ್ಟ್ಯಾಂಡ್. ನಾಚಿಕೆ ಆಗುವುದಿಲ್ಲವೇ ನಿಮಗೆ? ಅಮಾಯಕರ ಕುಮಾರಸ್ವಾಮಿ ಅವರೇ, ಹೋಮ ಹವನ ಮಾಡುವಂತಹ ನೀವು ಪೋಲಿಸ್ ಸ್ಟೇಷನ್ ಮೇಲೆ, ದೇವಸ್ಥಾನದ ಮೇಲೆ ಕಲ್ಲು ತೂರಿದವರು ಅಮಾಯಕರೆನ್ನುತ್ತೀರಾ’ ಎಂದು ಪ್ರಶ್ನಿಸಿದರು.
‘ಮುಸ್ಲಿಮರ ಪರ ನಿಂತು ಕಾಂಗ್ರೆಸ್ ನೆಲಕಚ್ಚಿದೆ, ಕುಮಾರಸ್ವಾಮಿಯವರೇ ಮುಂದಿನ ದಿನಗಳಲ್ಲಿ ಇದೇ ನಿಲುವು ಅನುಸರಿಸಿದರೆ ಜೆಡಿಎಸ್ ಕೂಡ ನೆಲಕಚ್ಚುತ್ತದೆ. ಅಲ್ಲಿರುವ ಅಕ್ರಮ ಮನೆಗಳಿವೆ ಅದನ್ನು ಕಿತ್ತು ಬಿಸಾಕಿ’ ಎಂದು ಸವಾಲೆಸೆದರು.
‘ಬುದ್ದಿ ಜೀವಿಗಳು ಬಾಯಿ ಮುಚ್ಚಿಕೊಂಡಿದ್ದಾರೆ. ಅವರೆಲ್ಲರೂ ಮುಸ್ಲಿಂ ಕ್ರಿಶ್ವಿಯನರ ಎಜೆಂಟರು’ ಎಂದರು.
ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನಸಿದ ಘಟನೆ ಮೇ 6ರಂದು ನಡೆದಿದ್ದು,…
ಜಿಲ್ಲೆಯ ಮಲೇ ಮಹದೇಶ್ವರ ಬೆಟ್ಟದ ಹಾಡಿಯೊಂದರ ಸಮೀಪ ಆನೆಗಳ ಹಿಂಡೊಂದು ಜಾನುವಾರುಗಳಿಗೆ ಕಟ್ಟಿಸಿರುವ ನೀರಿನ ತೊಟ್ಟಿಯಲ್ಲಿ ದಾಹ ತೀರಿಸಿಕೊಂಡು ಕಾಡಿಗೆ…
ರೈಲ್ವೆ ನಿಲ್ದಾಣಗಳಿಗೆ ಭೇಟಿ ನೀಡುವ ಪ್ರಯಾಣಿಕರ ಯೋಗಕ್ಷೇಮವನ್ನು ಹೆಚ್ಚಿಸುವ ಅನ್ವೇಷಣೆಯಲ್ಲಿ, ಭಾರತೀಯ ರೈಲ್ವೆ ಇಲಾಖೆ 2023ರ ಆಗಸ್ಟ್ ತಿಂಗಳಲ್ಲಿ ಪ್ರಧಾನ…
ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಸಂಬಂಧಿಸಿದಂತೆ ಜನ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಜಾನುವಾರುಗಳ ಮೇವಿಗೆ ಯಾವುದೇ ಕೊರತೆಯಾಗದಂತೆ ಜಿಲ್ಲಾಡಳಿತ ವತಿಯಿಂದ…
ವರುಣನ ಅಬ್ಬರಕ್ಕೆ ಕೆರೆಕಟ್ಟೆಗಳು ಭರ್ತಿಯಾಗಿದ್ದು, ನಂಜನಗೂಡು ತಾಲ್ಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಸುತ್ತೂರು, ತಾಯೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಗ್ರಾಮಗಳಲ್ಲಿ…
ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು, ಚುನಾವಣಾ ಆಯೋಗದ ನಿಯಮಗಳನ್ನ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ. ನಿನ್ನೆಯಷ್ಟೇ ತಸ್ವೀರ್ ಎಂಬುವ ವ್ಯಕ್ತಿ…