News Karnataka Kannada
Friday, May 03 2024
ಚಿಕಮಗಳೂರು

ಚಿಕ್ಕಮಗಳೂರು ಚೆಕ್ ಪೋಸ್ಟ್‌ಗಳಲ್ಲಿ ೧೩.೫ ಕೆ.ಜಿ.ಚಿನ್ನ ವಶ

13.5 kg gold seized at Chikkamagaluru check posts
Photo Credit : News Kannada

ಚಿಕ್ಕಮಗಳೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಜಿಲ್ಲಾದ್ಯಂತ ಇದುವರೆಗೆ ೯ ಪ್ರಕರಣಗಳನ್ನು ದಾಖಲಾಗಿದೆ. ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ೨೨ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ.

ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸ್ ಸಿಬ್ಬಂದಿಗಳು ೨೪ ಗಂಟೆಗಳ ಕಾಲ ತಪಾಸಣೆ ನಡೆಸುತ್ತಿದ್ದಾರೆ ಎಂದು ಚಿಕ್ಕಮಗಳೂರು ಎಸ್‌ಪಿ ಉಮಾ ಪ್ರಶಾಂತ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಹೋಮ್‌ಸ್ಟೇಗಳನ್ನು ತಪಾಸಣೆ ಮಾಡಲಾಗಿದೆ. ಜಿಲ್ಲಾದ್ಯಂತ ೯,೧೦೦ ಪರವಾನಿಗೆ ಹೊಂದಿದ ಬಂದೂಕುಗಳಿದ್ದು, ೩,೫೦೦ ಬಂದೂಕುಗಳನ್ನು ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡೆಪಾಸಿಟ್ ಮಾಡಿದ್ದಾರೆ. ಉಳಿದವರೂ ಶೀಘ್ರ ಬಂದೂಕುಗಳನ್ನು ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡೆಪಾಸಿಟ್ ಮಾಡಬೇಕು ಎಂದು ತಿಳಿಸಿದ್ದಾರೆ.

ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಯಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ಪೊಲೀಸ್ ಇಲಾಖೆ ಕಣ್ಣಿಟ್ಟಿದ್ದು, ಇದುವರೆಗೂ ೪೮೬ ಜನರ ಮೇಲೆ ಸೆಕ್ಯೂರಿಟಿ ಕೇಸ್ ದಾಖಲೆ ಮಾಡಲಾಗಿದೆ. ಚೆಕ್‌ಪೋಸ್ಟ್‌ಗಳಲ್ಲಿ ಹಾಗೂ ದಾಳಿಯ ಸಂದರ್ಭದಲ್ಲಿ ವಸ್ತುಗಳನ್ನು ವಶಪಡಿಸಿಕೊಂಡ ನಂತರ ನ್ಯಾಯಾಲಯದ ಗಮನಕ್ಕೆ ತಂದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸ ಬೇಕಾಗಿರುವುದರಿಂದ ಪ್ರಕರಣ ದಾಖಲಿಸಲು ವಿಳಂಬವಾಗುತ್ತಿದೆ ಎಂದರು.

ಇನ್ನು ಐದು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ೨೨ ಚೆಕ್‌ಪೋಸ್ಟ್‌ಗಳಲ್ಲಿ ಎರಡು ಸಿಸಿ ಕ್ಯಾಮಾರಗಳನ್ನು ಅಳವಡಿಸಲಾಗಿದೆ. ಅಧಿಕಾರಿಗಳು ಚೆಕ್‌ಪೋಸ್ಟಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ೧೩ಕೆ.ಜಿ ಗಾಂಜಾ, ೬೨೪ ಲೀ. ಮದ್ಯವ ನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ೯ ಕೋಟಿ ೮೫ಲಕ್ಷ ರೂ. ಮೌಲ್ಯದ ವಸ್ತುಗಳು ಸೇರಿದಂತೆ ನಗದನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು