ಚಾಮರಾಜನಗರ: ಮೂಲಸೌಕರ್ಯ ಕೊರತೆಯಿಂದ ಚಾಮರಾಜನಗರ ಜಿಲ್ಲೆಯ 13 ಸರ್ಕಾರಿ ಶಾಲೆಗಳು ಮುಚ್ಚಲ್ಪಟ್ಟಿವೆ ಎಂದು ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರ ರಾಜೇರಸ್ ತಿಳಿಸಿದ್ದಾರೆ.
ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶೂನ್ಯ ದಾಖಲಾತಿ, ಶಿಥಿಲಗೊಂಡ ಶಾಲಾ ಕಟ್ಟಡಗಳ ಕಾರಣದಿಂದ ಸರ್ಕಾರಿ ಶಾಲೆಗಳಿಂದ ವಿದ್ಯಾರ್ಥಿಗಳು ದೂರವುಳಿಯುವಂತಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಗಣನೀಯವಾಗಿ ಕುಸಿದಿದ್ದು, ಸರ್ಕಾರಿ ಶಾಲೆಗಳನ್ನು ಉಳಿಸಲು ಸಾರ್ವಜನಿಕರ ಸಹಭಾಗಿತ್ವವಿಲ್ಲ ಎಂಬ ಅಂಶಗಳನ್ನು ಇದು ತಿಳಿಸುತ್ತದೆ ಎಂದು ಹೇಳಿದ್ದಾರೆ. ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸಲು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಯನ್ನು ಬಳಸಿಕೊಳ್ಳಲು ಸಂಘಟಿತ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆಯೊಂದಿಗೆ ಚರ್ಚೆ ಆರಂಭಿಸಲಾಗಿದೆ ಎಂದು ಅರಸ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಶಿವಕುಮಾರ್ ಅವರು ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮೂಲಕ ಮೂರು ವರ್ಷಗಳ ಅವಧಿಯಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷೆಯ ಯೋಜನೆ ಬಗ್ಗೆ ವಿವರಿಸಿದ್ದರು. ಹಲವಾರು ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳನ್ನು ಹೆಚ್ಚಿಸಲು ನಿಗದಿ ಮಾಡಿದ ಸಿಎಸ್ಆರ್ ಅನುದಾನವನ್ನು ತಪ್ಪಾಗಿ ಹಂಚಿಕೆ ಮಾಡಿರುವುದು ಬೆಳಕಿಗೆ ಬಂದಿದೆ.
ಈ ಪ್ರವೃತ್ತಿಗೆ ಕಡಿವಾಣ ಹಾಕಲು ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆ ಗುರುತಿಸಿ ದತ್ತು ತೆಗೆದುಕೊಳ್ಳುವಂತೆ ಶಿವಕುಮಾರ್ ಸಲಹೆ ನೀಡಿದರು. ಕಾರ್ಪೊರೇಟ್ ಸಂಸ್ಥೆಗಳು ಮತ್ತು ಖಾಸಗಿ ಶಾಲೆಗಳ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದು ಸರ್ಕಾರದ ಗುರಿ ಎಂದು ಶಿವಕುಮಾರ್ ತಿಳಿಸಿದ್ದರು.