ಚಿಕ್ಕಮಗಳೂರು: ಇಂದು ಒಂದೇ ದಿನ 4 ಹೊಸ ಕೋವಿಡ್ ಪ್ರಕರಣಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ದಾಖಲಾಗಿವೆ.
ಕೊರೊನಾ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯಿಂದ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಶೀತ, ಕೆಮ್ಮು, ನೆಗಡಿ, ಜ್ವರ, ಬಂದರೆ ಪರೀಕ್ಷೆ ಮಾಡಿಸಿಕೊಳ್ಳಿ. 60 ವರ್ಷ ಮೇಲ್ಪಟ್ಟರು ಪ್ರತಿನಿತ್ಯ ಮಾಸ್ಕ್ ಧರಿಸಿ. ಮುಂಜಾಗ್ರತಾ ಕ್ರಮ ಅನುಸರಿಸಿ ಎಂದು ಮನವಿ ಮಾಡಲಾಗಿದೆ.
ಈ ಕೋವಿಡ್ ಅಲೆ ಎದುರಿಸಲು ಜಿಲ್ಲಾ ಆಸ್ಪತ್ರೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ವಿಶೇಷ ಘಟಕ, ಬೆಡ್ ವ್ಯವಸ್ಥೆ, ಆಕ್ಸಿಜನ್ ವ್ಯವಸ್ಥೆ, ಜಿಲ್ಲಾ ಆಸ್ಪತ್ರೆಯಲ್ಲಿ ಇದೆ. ಈಗಾಗಲೇ ಆರ್ಟಿಪಿಸಿಆರ್ ಟೆಸ್ಟ್ ಪ್ರಾರಂಭ ಮಾಡಿದ್ದೇವೆ ಎಂದು ಜಿಲ್ಲಾ ಸರ್ಜನ್ ಡಾ. ಸಿ. ಮೋಹನ್ ಕುಮಾರ್ ಹೇಳಿದರು.
ಕೊರೋನ ಪಾಸಿಟಿವ್ ಬಂದವರಿಗೆ ಹೋಂ ಐಸೋಲೇಶನ್ ವ್ಯವಸ್ಥೆ ಮಾಡಲಾಗಿದೆ. ಪಾಸಿಟಿವ್ ಬಂದ ವರದಿಗಳ ಮಾದರಿಗಳನ್ನು ಬೆಂಗಳೂರಿಗೆ ರವಾನೆ ಮಾಡಲಾಗಿದ್ದು, JN1 ರೂಪಾಂತರಿ ಕೋವಿಡ್ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ.