ಚಿಕ್ಕಮಗಳೂರು: ಕರ್ನಾಟಕ ಸಾರಿಗೆ ಸಂಸ್ಥೆ ಬದಲಾವಣೆಗೆ ಮುಂದಾಗಿದ್ದು, ಎಲೆಕ್ಟ್ರಿಕ್ ಬಸ್ಗಳ ಕಡೆ ಮುಖ ಮಾಡಿದೆ. ಚಿಕ್ಕಮಗಳೂರಿನಿಂದ ಬೆಂಗಳೂ ರಿಗೆ 6 ಎಲೆಕ್ಟ್ರಿಕ್ ಬಸ್ ಸೇವೆಯನ್ನು ಕಲ್ಪಿಸ ಲಾಗಿದೆ. ಎಲೆಕ್ಟ್ರಿಕ್ ಬಸ್ ನಲ್ಲಿ ಪ್ರಯಾಣ ಮಾಡಿದ ಪ್ರಯಾಣಿಕರು ತಡೆರಹಿತ ಪ್ರಯಾಣಕ್ಕೆ ಸಂತಸ ಹೊರಹಾಕುತ್ತಿದ್ದಾರೆ.
ಎಲೆಕ್ಟ್ರಿಕ್ ಬಸ್ ಪ್ರಯಾಣದ ಅನುಕೂಲ: ಬೆಂಗಳೂರಿಗೆ ೬ಎಲೆಕ್ಟ್ರಿಕ್ ಬಸ್ ಸೇವೆಯ ಮೂಲಕ ಬೆಂಗಳೂರು-ಚಿಕ್ಕಮಗಳೂರು ಸಂಪರ್ಕದ ನಡುವೆ ಬರುವ ಹಾಸನ-ಬೇಲೂರು ಪ್ರಯಾಣಿಕರಿಗೂ ಸುಖಾಸೀನ ಎಲೆಕ್ಟ್ರಿಕ್ ಬಸ್ ಪ್ರಯಾಣದ ಅನುಕೂಲ ಸಿಕ್ಕಂತಾಗಿದೆ. ದುಬಾರಿ ಇಂಧನ ಬೆಲೆ ಹಾಗೂ ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಅಮೂಲಾಗ್ರ ಬದಲಾವಣೆಯಾಗುತ್ತಿದ್ದು, ಪೇಟ್ರೋಲ್, ಡಿಸೇಲ್ ಬೈಕ್, ಕಾರು ಹಾಗೂ ಆಟೋಗಳ ಜಾಗವನ್ನು ಎಲೆಕ್ಟ್ರಿಕ್ ಬೈಕ್ ಕಾರು ಮತ್ತು ಆಟೋಗಳು ಆವರಿಸಿಕೊಳ್ಳುತ್ತಿದೆ.
ಈ ಹಿಂದೆ ಚಿಕ್ಕಮಗಳೂರಿನಿಂದ ಬೆಂಗ ಳೂರಿಗೆ 6 ವೋಲ್ವೊ ಬಸ್ ಸಂಚಾರ ನಡೆಸುತ್ತಿದ್ದವು. ವೋಲ್ವೊ ಬಸ್ಗಳ ಬದಲಾಗಿ ಸದ್ಯ ಇವಿ ಪವರ್ ಪ್ಲೇಸ್ ಎಂಬ ಎಲೆಕ್ಟ್ರಿಕ್ ಬಸ್ಗಳು ಸಂಚಾರ ಆರಂಭಿಸಿವೆ. ಚಿಕ್ಕಮಗ ಳೂರು-ಬೆಂಗಳೂರು ಸೇವೆ ನೀಡುವ ಜೊತೆಗೆ ಹಾಸನ-ಬೇಲೂರು ಪ್ರಯಾಣಿಕರಿಗೂ ಸೇವೆ ಒದಗಿಸುತ್ತಿವೆ. ವೋ ಲ್ವೊ ಬಸ್ ನಂತೆ ಅತ್ಯಾಕರ್ಷಕ ವಿನ್ಯಾಸವನ್ನು ಹೊಂದಿರುವ ಈ ಬಸ್ಗಳ ಪ್ರಯಾಣಿಕರ ಸುಖಕರ ಪ್ರಯಾಣಕ್ಕೆ ಬೇಕಾಗುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ನಿತ್ಯ ಬೆಳಿಗ್ಗೆ ೫ ಗಂಟೆಯಿಂದ ಸಂಚಾರ ಆರಂಭ: ಬೆಂಗಳೂರಿನಿಂದ ನಿತ್ಯ ಬೆಳಿಗ್ಗೆ ೫ಗಂಟೆ ಯಿಂದ ಸಂಚಾರ ಆರಂಭಿಸುವ ಆರು ಇವಿ ಪವರ್ ಪ್ಲೇಸ್ ಬಸ್ಗಳ ರಾತ್ರಿ 12ಗಂಟೆಯ ವರೆಗೂ ಪ್ರಾಯಾಣಿಕರ ಸೇವೆ ಸಲ್ಲಿಸಲಿವೆ. ಬೆಂಗಳೂರು-ಚಿಕ್ಕಮಗಳೂರು ಸಂಚಾರ ಕಲ್ಪಿಸುವ ಎಲೆಕ್ಟ್ರಿಕ್ ಬಸ್ಗಳ ಬ್ಯಾಟರಿ ಚಾರ್ಚ್ಗಾಗಿ ನಗರದ ಕೆಎಸ್ಆರ್ಟಿಸಿ ಡಿಪೋದಲ್ಲಿ ಎರಡು ಚಾರ್ಜರ್ ಘಟಕಗಳನ್ನು ಸ್ಥಾಪಿಸಲಾಗಿದ್ದು, ಏಕಕಾಲದಲ್ಲಿ ಎರಡು ಬಸ್ಗಳ ಬ್ಯಾಟರಿ ಚಾರ್ಜ್ ಮಾಡಬಹುದಾಗಿದೆ. ಒಮ್ಮೆ ಬ್ಯಾಟರಿ ಚಾರ್ಜ್ ಮಾಡಲು ಎರಡು ಗಂಟೆಗಳ ಕಾಲಾವಕಾಶ ಬೇಕಾಗಿದ್ದು, ಒಮ್ಮೆ ಚಾರ್ಜ್ ಮಾಡಿದಲ್ಲಿ ೩೦೦ ಕಿ.ಮೀ. ಸಾಗುವ ಸಾಮರ್ಥ್ಯ ವನ್ನು ಹೊಂದಲಾಗಿದೆ. ಪ್ರಯಾಣಿಕರ ಸುಖಕರ ಪ್ರಯಾಣಕ್ಕೆ ಅನುಕೂಲವಾಗುವಂತೆ ಎಸಿ, ಪುಶ್ಬ್ಯಾಕ್ ಸೀಟ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಬಸ್ನ ಒಳಬದಿ ಮತ್ತು ಹಿಂಬದಿಯಲ್ಲಿ ಸಿಸಿ ಕ್ಯಾಮಾರವನ್ನು ಅಳವಡಿಸಲಾಗಿದೆ.
ಟಿ.ವಿ., ಸೇರಿದಂತೆ ಮೊಬೈಲ್ ಚಾರ್ಜರ್ ವ್ಯವಸ್ಥೆಯನ್ನು ಪ್ರತೀ ಆಸನದಲ್ಲಿ ಕಲ್ಪಿಸಲಾಗಿದೆ. ಬಸ್ ನ ಶಬ್ಧವು ಕಡಿಮೆಯಾಗಿದೆ. ತಡೆರಹಿತ ಪ್ರಯಾಣಕ್ಕೆ ಹೇಳಿ ಮಾಡಿಸಿದ ಬಸ್ ಇದಾಗಿದೆ. ೪೫ ಆಸನಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಒಟ್ಟಾರೆ ವೋಲ್ವೊ ಬಸ್ ಗೆ ಯಾವುದೇ ಸೌಲಭ್ಯ ಕಡಿಮೆ ಇಲ್ಲದಂತೆಎಲೆಕ್ಟ್ರಿಕ್ ಬಸ್ ಗಳನ್ನು ವಿನ್ಯಾಸಗೊಳಿಸಿದ್ದು, ಜನಾಕರ್ಷಕ ವಾಗಿದೆ.
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್ಸಿಬಿ…
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 19.3 ಓವರ್ಗಳಲ್ಲಿ 147…
ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…