ಚಿಕ್ಕಮಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಬಲಿಯಾದ ಘಟನೆ ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆ ನಡೆದಿದೆ.
ಕಡೂರು ತಾಲೂಕಿನ ಸಖರಾಪಟ್ಟಣದ ಹೊಸಳ್ಳಿ ಮೂಲದ ಶಿಲ್ಪಾ ಎಂಬುವವರು ಹೆರಿಗೆಗಾಗಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ರು. ಸಿಜರಿನ್ ಮೂಲಕ ಹೆರಿಗೆ ಮಾಡಿಸುವಂತೆ ಮನವಿ ಮಾಡಿದ್ದರು. ಆದರೆ ವೈದ್ಯರು ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಾಗ ಹೆರಿಗೆ ಮಾಡಿಸಲು ಮುಂದಾಗಿದ್ದು, ಜನ್ಮ ನೀಡ್ತಿದ್ದಂತೆ ಮಗು ಸಾವನಪ್ಪಿದೆ. ವೈದ್ಯರು ಸರಿಯಾದ ಸಮಯದಲ್ಲಿ ಸ್ಪಂದಿಸಿಲ್ಲ. ಹೀಗಾಗಿ ಮಗು ಸಾವನ್ನಪ್ಪಿದೆ ಅಂತಾ ಶಿಲ್ಪಾ ಕುಟುಂಬಸ್ಥರು ಅರೋಪಿಸಿದ್ದಾರೆ.
ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಗೆ ನಗರ ಪೊಲೀಸರು ಆಗಮಿಸಿ ಮಾಹಿತಿ ಪಡೆದ್ದಾರೆ. ಘಟನೆ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.