News Karnataka Kannada
Friday, May 03 2024
ಚಿಕಮಗಳೂರು

ಬಾಳೆಹೊನ್ನೂರು: 18 ನಾಡ ಬಂದೂಕು ವಶ, ಇಬ್ಬರಿಗೆ ನ್ಯಾಯಾಂಗ ಬಂಧನ

Balehonnur: 18 country-made pistols seized, two sent to judicial custody
Photo Credit : News Kannada

ಬಾಳೆಹೊನ್ನೂರು: ಬಾಳೆ ಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಬಂದೂಕು ದುರಸ್ತಿ ಕೇಂದ್ರಗಳ ಮೇಲೆ ದಾಳಿ ನಡೆಸಿ ಒಟ್ಟು 18 ನಾಡ ಬಂದೂಕುಗಳನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಪಡಿಸಲಾಗಿದೆ.

ಕೊಪ್ಪ ಎಎಸ್‌ಪಿ ಗುಂಜನ್ ಆರ್ಯ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿ, ಬಿದರೆ ಗ್ರಾಮದಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮ ಬಂದೂಕಿನಿಂದ ಗುಂಡಿಕ್ಕಿ ಇಬ್ಬರನ್ನು ಹತ್ಯೆಗೈದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಸೂಚನೆಯಂತೆ ಬಂದೂಕುಗಳನ್ನು ದುರಸ್ತಿ ಮಾಡುವ ಎರಡು ಕೇಂದ್ರಗಳ ಮೇಲೆ ದಾಳಿ ನಡೆಸಿ ಒಟ್ಟು 18 ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹಿರೇಗದ್ದೆ ಗ್ರಾಮದ ಅಡಿಗೆಬೈಲಿನ ಸದಾಶಿವ ಆಚಾರ್ಯ ಎಂಬುವವರ ಕೋವಿ ದುರಸ್ತಿ ಕೇಂದ್ರದಲ್ಲಿ ಪರವಾನಗಿ ಇಲ್ಲದ 15 ನಾಡ ಬಂದೂಕು (ರಂಭಾಪುರಿಮಠ ರಸ್ತೆ) ಯ ರಾಮಚಂದ್ರ ಆಚಾರ್ಯ ಅವರ ಕೋವಿ ದುರಸ್ತಿ ಕೇಂದ್ರದಲ್ಲಿ ಪರವಾನಗಿ ರಹಿತ 3 ನಾಡ ಬಂದೂಕು ವಶಕ್ಕೆ ಪಡೆದು ದುರಸ್ತಿ ಕೇಂದ್ರದ ಮಾಲೀಕರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ವಶಪಡಿಸಿಕೊಂಡಿರುವ ಬಂದೂಕಗಳ ಕುರಿತು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿ ಯಾರದ್ದು ಎಂದು ತಿಳಿದು ಕೊಳ್ಳಲಾಗುವುದು ಎಂದರು.

ಪಾಸಣೆಗಾಗಿ ಈಗಾಗಲೇ ವಿಶೇಷ ತಂಡವನ್ನು ರಚನೆ ಮಾಡಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು