ಬಾಳೆಹೊನ್ನೂರು: ಬಾಳೆ ಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಬಂದೂಕು ದುರಸ್ತಿ ಕೇಂದ್ರಗಳ ಮೇಲೆ ದಾಳಿ ನಡೆಸಿ ಒಟ್ಟು 18 ನಾಡ ಬಂದೂಕುಗಳನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಪಡಿಸಲಾಗಿದೆ.
ಕೊಪ್ಪ ಎಎಸ್ಪಿ ಗುಂಜನ್ ಆರ್ಯ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿ, ಬಿದರೆ ಗ್ರಾಮದಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮ ಬಂದೂಕಿನಿಂದ ಗುಂಡಿಕ್ಕಿ ಇಬ್ಬರನ್ನು ಹತ್ಯೆಗೈದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಸೂಚನೆಯಂತೆ ಬಂದೂಕುಗಳನ್ನು ದುರಸ್ತಿ ಮಾಡುವ ಎರಡು ಕೇಂದ್ರಗಳ ಮೇಲೆ ದಾಳಿ ನಡೆಸಿ ಒಟ್ಟು 18 ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹಿರೇಗದ್ದೆ ಗ್ರಾಮದ ಅಡಿಗೆಬೈಲಿನ ಸದಾಶಿವ ಆಚಾರ್ಯ ಎಂಬುವವರ ಕೋವಿ ದುರಸ್ತಿ ಕೇಂದ್ರದಲ್ಲಿ ಪರವಾನಗಿ ಇಲ್ಲದ 15 ನಾಡ ಬಂದೂಕು (ರಂಭಾಪುರಿಮಠ ರಸ್ತೆ) ಯ ರಾಮಚಂದ್ರ ಆಚಾರ್ಯ ಅವರ ಕೋವಿ ದುರಸ್ತಿ ಕೇಂದ್ರದಲ್ಲಿ ಪರವಾನಗಿ ರಹಿತ 3 ನಾಡ ಬಂದೂಕು ವಶಕ್ಕೆ ಪಡೆದು ದುರಸ್ತಿ ಕೇಂದ್ರದ ಮಾಲೀಕರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ವಶಪಡಿಸಿಕೊಂಡಿರುವ ಬಂದೂಕಗಳ ಕುರಿತು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿ ಯಾರದ್ದು ಎಂದು ತಿಳಿದು ಕೊಳ್ಳಲಾಗುವುದು ಎಂದರು.
ಪಾಸಣೆಗಾಗಿ ಈಗಾಗಲೇ ವಿಶೇಷ ತಂಡವನ್ನು ರಚನೆ ಮಾಡಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದರು.