ಮೂಡಿಗೆರೆ: ಮೂಡಿಗೆರೆಯಲ್ಲಿ ಮಂಗಳವಾರ ಭೀಕರ ಘಟನೆಯೊಂದು ನಡೆದುಹೋಗಿದೆ. ಬೈಕ್ ಗೆ ತರಕಾರಿ ತುಂಬಿದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಪಟ್ಟಣದಲ್ಲಿ ನಡೆದಿದೆ. ತಾಲೂಕಿನ ಕೆಂಜಿಗೆ ಸಮೀಪದ ಬಾಳೆಹಳ್ಳಿ ನಿವಾಸಿ ಮಂಜುನಾಥ್ (30) ಮೃತ ವ್ಯಕ್ತಿ.
ತರಕಾರಿ ತುಂಬಿಕೊಂಡು ರಾಷ್ಟ್ರೀಯ ಹೆದ್ದಾರಿ ಮೂಲಕ ಮಂಗಳೂರಿಗೆ ಹೋಗುತ್ತಿದ್ದ ಲಾರಿ ಬೈಕ್ ಗೆ ಡಿಕ್ಕಿಯಾಗಿದೆ. ಪರಿಣಾಮ ತಂದೆ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದ ಮಂಜುನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತಂದೆಯ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಲಾರಿ ಚಾಲಕನ ಅವಸರದಿಂದ ಅಪಘಾತದ ರಭಸಕ್ಕೆ ಮೃತದೇಹವನ್ನ 1 ಕಿ.ಮೀ. ಎಳೆದೊಯ್ದ ಲಾರಿಯೂ ಪಲ್ಟಿಯಾಗಿದೆ.