ಚಿಕ್ಕಮಗಳೂರು: ಭಾರೀ ಮಳೆ ಪರಿಣಾಮ ಚಲಿಸುತ್ತಿದ್ದ ಕಾರಿನ ಮೇಲೆ ಏಕಾಏಕಿ ತೆಂಗಿನ ಮರ ಹಾಗೂ ವಿದ್ಯುತ್ ಕಂಬ ಬಿದ್ದಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ದೇವರಾಜು (35) ಮೃತ ದುರ್ದೈವಿ.
ಈ ಘಟನೆ ಲಿಂದದಹಳ್ಳಿ ಭಾಗದಲ್ಲಿ ನಡೆದಿದೆ. ಕಾರೊಂದು ಲಿಂಗದಹಳ್ಳಿ ಸಮೀಪದ ಕಲ್ಲತ್ತಗಿರಿಗೆ ಪೂಜೆಗೆಂದು ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇನ್ನು, ಕಾರಿನಲ್ಲಿದ್ದ ಐವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕೂಡಲೇ ಅವರನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಲಿಂಗದಳ್ಳಿ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.