ಚಿಕ್ಕಮಗಳೂರು: ಸ್ಕೂಟಿ-ಕಾರು ನಡುವೆ ಭೀಕರ ಅಪಘಾತ ನಡೆದು, ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನ ಹಿರೇಕಾನ ವಂಗಲ ಗ್ರಾಮದಲ್ಲಿ ನಡೆದಿದೆ.
ಅರ್ಜುನ್ ಹಾಗೂ ಶ್ವೇತ ಮೃತ ದುರ್ದೈವಿಗಳು. ಕಾರು ಡಿಕ್ಕಿಯ ರಭಸಕ್ಕೆ ಸ್ಕೂಟಿ ಸಂಪೂರ್ಣ ಜಖಂಗೊಂಡಿದ್ದು, ಕಾರು ಚಾಲಕನ ಅಜಾಗರೂಕತೆಯೇ ಅವಘಡಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಅಜ್ಜಂಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.