ಚಿಕ್ಕಮಗಳೂರು: ಚೆಕ್ ಬೌನ್ಸ್ ಪ್ರಕರಣ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಜಾಮೀನು ರಹಿತ ಬಂಧನ

ಚಿಕ್ಕಮಗಳೂರು: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದ್ದು, ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಅಲ್ಲದೇ ಶಾಸಕರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಚಿಕ್ಕಮಗಳೂರು ಎಸ್‌ಪಿಗೆ ನೋಟಿಸ್ ನೀಡಿದೆ.

ಶಾಸಕ ಕುಮಾರಸ್ವಾಮಿ ವಿರುದ್ಧ ಚಿಕ್ಕಮಗಳೂರು ಮೂಲದ ಹೂವಪ್ಪಗೌಡ ೮ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ಸಾಲದ ರೂಪದಲ್ಲಿ ಹಣ ಪಡೆದು ವಂಚನೆ ಮಾಡಿರುವುದಾಗಿ ಹೂವಪ್ಪ ಗೌಡ ದೂರು ನೀಡಿದ್ದರು. ಕಳೆದ ಮೂರು ವರ್ಷದಿಂದ ಪ್ರಕರಣದ ವಿಚಾರಣೆ ನಡೆಯುತ್ತಿದೆ.

ಈ ಹಿಂದೆ ಚೆಕ್ ಬೌನ್ಸ್ ಪ್ರಕರಣದ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಟ್ಟು ಎಂಟು ಪ್ರಕರಣಗಳಲ್ಲಿ ೧ ಕೋಟಿ ೩೮ ಲಕ್ಷದ ೬೫ ಸಾವಿರ ರೂಪಾಯಿ ಪಾವತಿಸುವಂತೆ ಸೂಚಿಸಿತ್ತು. ಇಲ್ಲವಾದರೆ ತಲಾ ೬ ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶದಲ್ಲಿ ತಿಳಿಸಿತ್ತು. ಆದರೆ ೩೦ ದಿನದ ಒಳಗೆ ಹಣ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಕೋರ್ಟ್ ಅರೆಸ್ಟ್ ವಾರಂಟ್ ಜಾರಿ ಮಾಡಿದೆ.
ಚಿಕ್ಕಮಗಳೂರು ಎಸ್‌ಪಿ ಉಮಾ ಪ್ರಶಾಂತ್‌ಗೆ ಬಿಜೆಪಿ ಶಾಸಕ ಕುಮಾರಸ್ವಾಮಿಯನ್ನು ಬಂಧಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೋಟಿಸ್ ನೀಡಿದೆ.

ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಒಂದಾದ ಮೇಲೆ ಒಂದು ಸಂಕಷ್ಟ ಎದುರಾಗುತ್ತಿದ್ದು, ಈ ಬಾರಿ ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಚಿಕ್ಕಮಗಳೂರು ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.

ಈ ಮಧ್ಯೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಶಾಸಕರ ವಿರುದ್ಧ ನಾನ್ ಬೇಲೇಬಲ್ ವಾರಂಟ್ ಜಾರಿಯಾಗಿದ್ದರೆ, ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿದೆ.

Ashika S

Recent Posts

ಆನೆ ಸೆರೆ ಕಾರ್ಯಾಚರಣೆಗೆ ಸಿದ್ಧತೆ: ಪುಂಡಾನೆ ಪತ್ತೆಗೆ ಟ್ರ್ಯಾಪ್ ಕ್ಯಾಮೆರಾ

ಕಾಡಾನೆ ಹಾವಳಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದು ವರ್ಷದ ಅವಧಿಯಲ್ಲಿ ಐದು ಜನ ಪ್ರಾಣ ಕಳೆದುಕೊಂಡಿದ್ದಾರೆ.

8 mins ago

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಇಬ್ಬರ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾದ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ.

20 mins ago

ರೈತರ ಕಷ್ಟ ಕೇಳುವವರಿಲ್ಲ: ವಿನಯ್ ಗುರೂಜಿ ವಿಷಾದ

ದೊಡ್ಡ ದೊಡ್ಡವರ ಕಷ್ಟ ಕೇಳಲು ದೊಡ್ಡ ದೊಡ್ಡವರಿದ್ದಾರೆ. ಆದರೆ ಜಗತ್ತಿಗೆ ಅನ್ನ ನೀಡುವ ರೈತನ ಕಷ್ಟ ಕೇಳುವ ಮನಸ್ಸು ದೊಡ್ಡವರಿಗಿಲ್ಲ…

33 mins ago

ಕೈಕೊಟ್ಟ ಶೀತಲಯಂತ್ರಗಳಿಂದ ಶವಾಗಾರದಲ್ಲಿ ದುರ್ವಾಸನೆ

ಎಲ್ಲರೂ ಮೂಗುಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಮೈಸೂರಿನ ಸರ್ಕಾರಿ ಮೆಡಿಕಲ್ ಕಾಲೇಜು  ಬಳಿಯ ಶವಾಗಾರದ ಬಳಿ ಎದುರಾಗಿದೆ. ಇದಕ್ಕೆ ಶವಾಗಾರದ ಶೀತಲ…

39 mins ago

ಸಾಗರೋತ್ತರ ಕಾಂಗ್ರೆಸ್‌  ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್‌ ಪಿತ್ರೋಡಾ ರಾಜೀನಾಮೆ

“ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಇದ್ದಾರೆ” ಎಂಬುದಾಗಿ ಹೇಳುವ ಮೂಲಕ ಮನುಷ್ಯರ ಚರ್ಮದ ಬಣ್ಣದ ಕುರಿತು ಕೀಳು ಹೇಳಿಕೆ ನೀಡಿ ವಿವಾದ…

55 mins ago

ಪೂಂಚ್​ನಲ್ಲಿ ವಾಯುಪಡೆಯ ವಾಹನದ ಮೇಲೆ ದಾಳಿ ಮಾಡಿದ ಉಗ್ರರ ಸುಳಿವು ಪತ್ತೆ

ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ  ನಡೆದ ಉಗ್ರರ ದಾಳಿಯಲ್ಲಿ IAF ಕಾರ್ಪೋರಲ್ ವಿಕ್ಕಿ ಪಹಡೆ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದರು.

1 hour ago