ಚಿಕ್ಕಮಗಳೂರು: ದೇಶ ಹಾಗೂ ರಾಜ್ಯದಲ್ಲಿ ಭ್ರಷ್ಟಾಚಾರ ಆಡಳಿತ ತೊಲಗಿಸುವ ದೃಷ್ಟಿಯಿಂದ ಜಿಲ್ಲಾ ಆಮ್ ಆದ್ಮಿ ಪಕ್ಷದ ಮುಖಂಡರುಗಳು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ವರೆಗೆ ಮೆರವಣಿಗೆ ನಡೆಸಿ ಪೊರಕೆಯಲ್ಲಿ ರಸ್ತೆ ಗುಡಿಸುವ ಮೂಲಕ ಭ್ರಷ್ಟಮುಕ್ತ ಅಭಿಯಾನಕ್ಕೆ ಚಾಲನೆ ನೀಡಿದರು.
ಜಂಟಿ ಕಾರ್ಯದರ್ಶಿ ಡಾ. ಕೆ.ಸುಂದರ ಗೌಡ ಮಾತನಾಡಿ ಸರ್ಕಾರ ಇಂದು ಸಾರ್ವ ಜನಿಕರ ತೆರಿಗೆಯನ್ನು ಹೆಚ್ಚಿಸುವ ಮೂಲಕ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡು ಶೇ.೪೦ ರಷ್ಟು ಕಮಿಷನ್ ಪಡೆಯುವ ಮೂಲಕ ಹಿಂದೇಂದು ಕಾಣದ ರೀತಿಯಲ್ಲಿ ಭಾರೀ ಭ್ರಷ್ಟಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದರು.
ರೈತ ಸಮೂಹಕ್ಕೆ ಯಾವುದೇ ಯೋಜನೆಗಳನ್ನು ನೀಡದ ಪರಿಣಾಮ ಕಳೆದ ಮೂರು ವರ್ಷಗಳಿಂದ ಇಲ್ಲಿ ಯವರೆಗೂ ಸುಮಾರು ಮೂರು ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಮೆಗೆ ಶರಣಾಗಿ ಜೀವ ಕಳೆದುಕೊ ಂಡಿದ್ದಾರೆ. ಇದುವರೆಗೂ ಆ ಕುಟುಂಬಗಳಿಗೆ ಸರ್ಕಾರ ಪರಿಹಾರ ಘೋಷಣೆ ಮಾಡದೇ ಅಸಡ್ಡೆ ವಹಿಸುತ್ತಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ರೈತಾಪಿ ವರ್ಗವನ್ನು ಸರ್ಕಾರಗಳು ಕಡೆಗಣಿಸಿದರೆ ದೇಶದ ಬೆನ್ನಲುಬು ಕಳಚಿದಂತಾ ಗುತ್ತದೆ ಎಂದ ಅವರು ಇದೇ ರೀತಿ ಸರ್ಕಾರಗಳು ರೈತರ ವಿಷಯದಲ್ಲಿ ಕಠಿಣ ನಿರ್ಣಯಗಳನ್ನು ಕೈಗೊಂಡಲ್ಲಿ ಮುಂದಿನ ಯುವಪೀಳಿಗೆ, ಪ್ರಜಾಪ್ರಭುತ್ವವನ್ನು ಕಳೆದುಕೊಳ್ಳುವ ಆತಂಕ ಎದುರಾಗಲಿದೆ ಎಂದರು.
ಇನ್ನಾದರೂ ಸಾರ್ವಜನಿಕರು ಎಚ್ಚೆತ್ತುಕೊಂಡು ಭ್ರಷ್ಟಮುಕ್ತ ಭಾರತ ನಿರ್ಮಾಣ ಮಾಡಲು ಪಣತೊಡ ಬೇಕು. ದೆಹಲಿ ಮಾದರಿಯ ಸಾರ್ವಜನಿಕರ ತೆರಿಗೆ ಹಣವನ್ನು ಸಾರ್ವಜನಿಕರ ಅಭಿವೃದ್ದಿಗೆ ಬಳಸಿದಂತೆ ರಾಜ್ಯದಲ್ಲೂ ಆ ರೀತಿಯ ಆಡಳಿತ ನಡೆಸಲು ಎಎಪಿಗೆ ಸಂಪೂರ್ಣ ಬೆಂಬಲ ಸೂಚಿಸಬೇಕು ಎಂದು ಆಗ್ರಹಿಸಿದರು.
ಎಎಪಿ ಜಿಲ್ಲಾಧ್ಯಕ್ಷ ಹೇಮಂತ್ ಮಾತನಾಡಿ ಹಿರಿಯ ನಾಯಕರುಗಳ ಆದೇಶದಂತೆ ಇಡೀ ರಾಜ್ಯಾದ್ಯಂತ ಪರಕೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ನಗರಸಭೆ, ತಾಲ್ಲೂಕು ಕಚೇರಿ ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳು ಭಾರೀ ಭ್ರಷ್ಟಚಾರದಲ್ಲಿ ತೊಡಗಿದ್ದು ಇವುಗಳಿಂದ ಸಾರ್ವಜನಿಕರು ಮುಕ್ತರಾಗಬೇಕಾದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಪಕ್ಷವನ್ನು ಬೆಂಬಲಿಸಬೇಕು ಎಂದರು.
ಜಿಲ್ಲೆಯ ಜನಪ್ರತಿನಿಧಿಗಳು ಎಲ್ಲೆಂದರಲ್ಲಿ ಆಸ್ತಿಗಳಿಸುವ ಮೂಲಕ ಜನಸಾಮಾನ್ಯರನ್ನು ಇನ್ನಷ್ಟು ಬಡವರನ್ನಾಗಿ ಮಾಡುತ್ತಿದ್ದಾರೆ. ಇವುಗಳನ್ನು ಸಾರ್ವಜನಿಕರು ಸೂಕ್ಷ್ಮವಾಗಿ ಗಮನಿಸಿ ಮುಂದಿನ ಚುನಾವಣೆಯಲ್ಲಿ ಎಎಪಿ ಅಭ್ಯರ್ಥಿಯನ್ನು ಬೆಂಬಲಿಸಿದರೆ ದೆಹಲಿ ಮಾದರಿಯ ಆಡಳಿತವನ್ನು ನಮ್ಮ ರಾಜ್ಯದಲ್ಲಿ ಅನುಷ್ಟಾನಕ್ಕೆ ತರಬಹುದು ಎಂದರು.