ಚಿಕ್ಕಮಗಳೂರು: ಮೂಡಿಗೆರೆಯಲ್ಲಿ ಮಹಿಳೆಯೊಬ್ಬರ ಮೇಲೆ ಆನೆ ದಾಳಿ ಮಾಡಿದ ನಂತರ ನ.25ರ ಶುಕ್ರವಾರದಂದು ಜಿಲ್ಲೆಯ ಕುಂದೂರು ಗ್ರಾಮದಲ್ಲಿ ಅರಣ್ಯ ಇಲಾಖೆಗೆ ಸೇರಿದ ಕಳ್ಳಬೇಟೆ ನಿಗ್ರಹ ಶಿಬಿರವನ್ನು ಪ್ರತಿಭಟನಾಕಾರರ ಗುಂಪೊಂದು ಧ್ವಂಸಗೊಳಿಸಿದೆ.
ಕಚೇರಿಗೆ ನುಗ್ಗಿ ಸಿಕ್ಕಿದ್ದ ವಸ್ತುಗಳನ್ನೆಲ್ಲಾ ಒಡೆದು ಹಾಕಿದ್ದಾರೆ. ಆನೆ ದಾಳಿ ನಿಯಂತ್ರಿಸದ ಅರಣ್ಯ ಇಲಾಖೆ ವಿರುದ್ಧ ಘೋಷಣೆ ಕೂಗಿದರು.
ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಆನೆಯನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು. ನಾಲ್ಕು ದಿನಗಳ ಹಿಂದೆ ನಡೆದ ಘಟನೆಯೊಂದಿಗೆ ಆನೆಗಳ ನಿರಂತರ ದಾಳಿಯಿಂದ ತತ್ತರಿಸಿರುವ ಜನರ ಆಕ್ರೋಶ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.