ಚಿಕ್ಕಮಗಳೂರು: ಬೆಂಗಳೂರಿನಿಂದ ಕಾಫಿನಾಡಿಗೆ ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಶೃಂಗೇರಿ ಶಾರದಾಂಬೆ ದೇವಸ್ಥಾನದ ಬಳಿ ನಡೆದಿದೆ.
ಮೃತನನ್ನು ಚಂದನ್ ಎಂದು ಗುರುತಿಸಲಾಗಿದೆ. ಅವರು ಜಿಗಣಿ ಕೃಷ್ಣ ಕಾಲೇಜಿನಲ್ಲಿ ಎರಡನೇ ವರ್ಷದ ಪದವಿಯಲ್ಲಿ ಓದುತ್ತಿದ್ದರು. ಕಾಲೇಜಿನಿಂದ ೬೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಚಂದನ್ ತುಂಗಾ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.