News Karnataka Kannada
Sunday, May 05 2024
ಚಿಕಮಗಳೂರು

ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದ ಜೆಡಿಎಸ್‌ ಮುಖಂಡ ಬೋಜೆಗೌಡಗೆ ಹಾಲಿನ ಅಭಿಷೇಕ

Chikkamagaluru: Bojegowda felicitated with milk abishek
Photo Credit : News Kannada

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಪೂರಕವಾದ ಎಸ್.ಎಲ್.ಬೋಜೇಗೌಡ ಅವರಿಗೆ ಎ.ಸಿ.ಕುಮಾರಗೌಡ ನೇತೃತ್ವದಲ್ಲಿ ನಗರದ ಹೊಸಬಡಾವಣೆ ಸರ್ಕಲ್‌ನಲ್ಲಿ ಸನ್ಮಾನಿಸಿ ಹಾಲಿನ ಅಭಿಷೇಕ ಮಾಡುವ ಮೂಲಕ ಯುವಕರು ಸಂಭ್ರಮಿಸಿದರು.

ಈ ವೇಳೆ ಎಸ್.ಎಲ್.ಬೋಜೇಗೌಡ ಮಾತನಾಡಿ ಚುನಾವಣೆಯಲ್ಲಿ ಚಿಕ್ಕಮಗಳೂರು ತಾಲ್ಲೂಕು ವಿಭಿನ್ನ ಕ್ಷೇತ್ರವಾಗಿದೆ. ಎಲ್ಲಾ ಮತದಾರರ ಆಶಯದಂತೆ ಭ್ರಷ್ಟ ಆಡಳಿತವನ್ನು ತೊಲಗಿಸಿ ಜನಾಭಿಪ್ರಾಯದಂತೆ ಆಡಳಿತ ನಡೆಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಕ್ಷೇತ್ರದಲ್ಲಿ ನೊಂದ ಜೀವಿಗಳು ಸಮಸ್ಯೆಗಳಿಗೀಡಾದ ಹಿನ್ನೆಲೆಯಲ್ಲಿ ಮತದಾರರು ತಿರುಗಿ ಬಿದ್ದು ಬದಲಾವಣೆ ಬಯಸಿದ್ದಾರೆ ಎಂದು ತಿಳಿಸಿದರು.

ನಗರಸಭಾ ಸದಸ್ಯ ಎ.ಸಿ.ಕುಮಾರಗೌಡ ಮಾತನಾಡಿ ಹಿಂದಿನ ಶಾಸಕರನ್ನು ಮಣಿಸಿ ನೂತನ ಶಾಸಕರನ್ನು ಹುಟ್ಟುಹಾಕಲು ಶ್ರಮವಹಿಸಿದ ಎಸ್.ಎಲ್.ಬೋಜೇಗೌಡರಿಗೆ ಸನ್ಮಾನಿಸುತ್ತಿರುವುದು ಅತ್ಯಂತ ಸಂತಸದ ಸಂಗತಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಗೋಪಿ, ದಿನೇಶ್, ಮುಖಂಡರುಗಳಾದ ಸಿ.ಕೆ.ಮೂರ್ತಿ, ಪೂರ್ಣೇಶ್, ದೀಪು, ಹೆಚ್.ಎಸ್.ಮಂಜಪ್ಪ, ಆನಂದೇಗೌಡ, ಶಿವಕುಮಾರ್, ಶ್ರೀನಿವಾಸ್ ಮತ್ತಿತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು