ಚಿಕ್ಕಮಗಳೂರು: ಬೋಜೇಗೌಡರ ಅನುಕಂಪದ ಮಾತು ನಾಟಕದ ಪರಮಾವಧಿ

ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮೋಸಮಾಡಿದ್ದ ಎಸ್.ಎಲ್.ಬೋಜೇಗೌಡ ಅವರಿಂದಲೇ ಅನುಕಂಪದ ಮಾತುಗಳು ನಾಟಕದ ಪರಮಾವಧಿಯಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೆಡಿಎಸ್‌ನೊಂದಿಗೆ ಅಧಿಕಾರ ಮಾಡಿದ್ದರಿಂದ ಬಿಜೆಪಿಗೆ ಶಕ್ತಿ ಬಂದಿದೆ ಎಂದು ಅವರು ಹೇಳಿರುವುದು ಹಾಸ್ಯಾಸ್ಪದ. ಬಿಜೆಪಿಯವರ ಕೃಪೆಯಿಂದ ೨೦ ತಿಂಗಳು ಅಧಿಕಾರ ಅನುಭವಿಸಿ ನಂತರ ಬಿ.ಎಸ್. ಯಡಿ ಯೂರಪ್ಪ ಅವರಿಗೆ ಮೋಸ ಮಾಡಿ ಅಧಿಕಾರವನ್ನು ತಪ್ಪಿಸಿದವರು ಯಾರು ಎಂದು ಹೇಳಲಿ.

ಮಾಜಿ ಸಿಎಂ ಎಚ್‌ಡಿಕೆ ಮತ್ತು ಎಸ್.ಎಲ್.ಬೋಜೇಗೌಡ ಅವರ ಪಿತೂರಿಯಿಂದಲೇ ಯಡಿಯೂರಪ್ಪನವರ ಮೇಲೆ ಸುಳ್ಳು ಕೇಸ್ ದಾಖಲಿಸಿ ಅವರನ್ನು ಜೈಲಿಗೆ ಕಳುಹಿಸಿದ್ದನ್ನು ರಾಜ್ಯದ ಜನ ಮರೆತಿಲ್ಲ ಎಂದರು.

ಬೋಜೇಗೌಡರು ತಾವು ಅಧಿಕಾರದಲ್ಲಿದ್ದಾಗ ಯಾವ ರೀತಿ ನಡೆದು ಕೊಂಡಿದ್ದಾರೆ. ಯಾರ್‍ಯಾರಿಗೆ ತೊಂದರೆ ಕೊಟ್ಟಿದ್ದೀರಾ ಎಂಬುದನ್ನು ಪಿಳ್ಳೇನಹಳ್ಳಿ ಸುತ್ತಮುತ್ತಲ ಜನ ಹೇಳುತ್ತಾರೆ ಎಂದರು.

ಬೋಜೇಗೌಡರಿಗೆ ತಾಕತ್ತಿದ್ದರೆ ಶಾಸಕ ಸಿ.ಟಿ.ರವಿಯವರ ವಿರುದ್ಧ ಅವರ ಪಕ್ಷದ ಯಾವ ದೊಡ್ಡ ನಾಯಕರನ್ನಾದರೂ ತಂದು ನಿಲ್ಲಿಸಲಿ, ಆಗ ಬೋಜೇಗೌಡರಿಗೆ ಸೋಲಿನ ರುಚಿ ತೋರಿಸುತ್ತೇವೆ ಎಂದರು.

ಕಾಂಗ್ರೆಸ್ ವಕ್ತಾರ ರವೀಶ್ ಬಸಪ್ಪ ಅವರು ತಮ್ಮ ಇರುವಿಕೆ ತೋರಿಸಿ ಕೊಳ್ಳಲು ಗ್ರಾಮ ವಾಸ್ತವ್ಯದ ಬಗ್ಗೆ ಟೀಕೆ ಮಾಡಿದ್ದಾರೆ . ಕಂದಾಯ ಸಚಿವರ ಹುಲಿಕೆರೆ ಗ್ರಾಮ ವಾಸ್ತವ್ಯದಿಂದ ಆ ಭಾಗದ ಜನರ ಸಮಸ್ಯೆಗ ಳಿಗೆ ಪರಿಹಾರ ದೊರೆತಿದೆ. ೯೫೦ ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದ್ದಾರೆ. ಬಡವರ ಬಗ್ಗೆ ಕಾಂಗ್ರೆಸ್‌ಗೂ ಅನುಕಂಪವಿರಲಿ ಎಂದರು.

ವಕ್ತಾರ ದೀಪಕ್‌ದೊಡ್ಡಯ್ಯ, ರಂಗನಾಥ, ಕವಿತಾಶೇಖರ್, ದಿನೇ ಶ್, ಅಂಕಿತಾ ಮತ್ತಿತರರಿದ್ದರು.

Ashika S

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

22 mins ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

46 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

1 hour ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

3 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 hours ago