News Karnataka Kannada
Saturday, May 11 2024
ಚಿಕಮಗಳೂರು

ಚಿಕ್ಕಮಗಳೂರು: ಬಿ.ಎಸ್.ಪಿ ಅಭ್ಯರ್ಥಿಯ ಬಿರುಸಿನ ಪ್ರಚಾರ

Chikkamagaluru: Bsp candidate campaigning vigorously
Photo Credit : News Kannada

ಚಿಕ್ಕಮಗಳೂರು: ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ಕೆ.ಬಿ.ಸುಧಾ ಅವರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬಿರುಸಿನ ಚುನಾವಣಾ ಪ್ರಚಾರ ನಡೆಸಿದರು.

ಚುನಾವಣಾ ಪ್ರಚಾರಕ್ಕಾಗಿಯೇ ವಿಶೇಷವಾಗಿ ಸಜ್ಜುಗೊಳಿಸಲಾದ ಬಹುಜನವಾಹಿನಿ ವಾಹನದಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಮತ್ತು ಅಭಿಮಾನಿಗಳೊಂದಿಗೆ ತೆರಳಿ ತಾಲೂಕಿನ ಹಿರೇಮಗಳೂರು, ಕರ್ತಿಕೆರೆ, ಬಿಳೇಕಲ್ಲು ಮತ್ತು ಕುರುವಂಗಿಯಲ್ಲಿ ಮತಯಾಚನೆ ಮಾಡಿದರು.

ಗ್ರಾಮಗಳ ಮನೆ ಮನೆಗಳಿಗೆ ತೆರಳಿ ಉಜ್ವಲ ಭವಿಷ್ಯಕ್ಕಾಗಿ ಈ ಬಾರಿ ಬದಲಾವಣೆ ತರುವಂತೆ ಬಹುಜನ ಸಮಾಜ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕರ್‌ಅವರ ಸಂವಿಧಾನ ಇಡಿಯಾಗಿ ಜಾರಿಯಾಗಬೇಕಾದರೆ ಬಿಎಸ್‌ಪಿ ಕೇಂದ್ರ ಮತ್ತು ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಬೇಕು ಎಂದರು.
ಇದುವರೆಗೆ ಅಧಿಕಾರ ನಡೆಸಿರುವ ಎಲ್ಲಾ ಪಕ್ಷಗಳೂ ತಮ್ಮ ಲಾಭಕ್ಕಾಗಿ ತಮಗೆ ಬೇಕಾದಂತೆ ಸಂವಿಧಾನವನ್ನು ತಿರುಚಿವೆ. ಇದರಿಂದಾಗಿ ಸಂವಿಧಾನ ಶಿಲ್ಪಿಯ ಮೂಲ ಆಶಯಕ್ಕೆ ಧಕ್ಕೆಯಾಗಿದೆ ಎಂದು ಹೇಳಿದರು.

ಸಂವಿಧಾನವನ್ನು ಇಡಿಯಾಗಿ ಜಾರಿಗೊಳಿಸಲು ಬಹುಜನ ಸಮಾಜ ಪಕ್ಷದಿಂದ ಮಾತ್ರ ಸಾಧ್ಯ. ಹಾಗಾಗಿ ಮತದಾರರು ಬಿಎಸ್‌ಪಿಯನ್ನು ಚುನಾಯಿಸಬೇಕು ಎಂದುಕೋರಿದರು.

ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಮಾತನಾಡಿ, ಕೆಳ ವರ್ಗದಜನ ಮತದಾನದ ದಿನವನ್ನು ತಮ್ಮ ವಿಮೋಚನೆಯ ದಿನ ಎಂದು ಭಾವಿಸಬೇಕು .ತಮ್ಮಏಳಿಗೆ ಮತ್ತು ಉಜ್ವಲ ಭವಿಷ್ಯಕ್ಕಾಗಿ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಗಳಿಗೆ ಮತನೀಡುವ ಸಂಕಲ್ಪ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕೆಳ ವರ್ಗದಜನ ಈ ಬಾರಿ ಬಿಎಸ್‌ಪಿಯನ್ನು ಗೆಲ್ಲಿಸುವ ಪ್ರತಿಜ್ಞೆ ಮಾಡಿದರೆ ಮೇ.೧೩ರ ನಂತರ ರಾಜ್ಯದಲ್ಲಿ ಹೊಸ ಯುಗ ಆರಂಭವಾಗುತ್ತದೆ ಎಲ್ಲರೂ ಶಾಂತಿ, ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತದೆ ಎಂದರು.

ಬಿಎಸ್‌ಪಿ ಜಿಲ್ಲಾ ಉಪಾಧ್ಯಕ್ಷ ಕೆ.ಆರ್.ಗಂಗಾಧರ್, ಅಸೆಂಬ್ಲಿ ಸಂಯೋಜಕಿ ಕೆ.ಎಸ್. ಮಂಜುಳಾ, ಪಕ್ಷದ ಮುಖಂಡರಾದ ಜಯಚಂದ್ರ, ವಿಜಯಕುಮಾರ್, ಸಿದ್ದಯ್ಯ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು