ಚಿಕ್ಕಮಗಳೂರು: ಕೇಸರಿ ಎಂದರೆ ತಲೆ ತಿರುಗುವ ನಾಯಕರಿರುವ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು, ಮುಖ್ಯಮಂತ್ರಿ ಆಗಬೇಕು ಎಂದು ಹವಣಿಸುತ್ತಿದೆ. ರಾಜ್ಯದ ಜನರು ಅವರನ್ನು ಕ್ಷಮಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಜಿಲ್ಲಾ ಬಿಜೆಪಿ ವತಿಯಿಂದ ಇಂದು ನಗರದ ಎಐಟಿ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಯುವ ಸಂಗಮ ಕಾರ್ಯಕ್ರಮದಲ್ಲಿ ಅವರು ಮುಖ್ಯ ಭಾಷಣ ಮಾಡಿದರು.
ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಹಗಲುಗನಸು ಕಾಂಗ್ರೆಸ್ ನದ್ದು, ಕಾಂಗ್ರೆಸಿಗರಿಗೆ ನಾವೂ ಹಿಂದೂಗಳು ಎನ್ನುವ ಹೆಮ್ಮೆ ಇದ್ದಿದ್ದರೆ. ತಮ್ಮ ಅಧಿಕಾರದಲ್ಲಿ ೨೫ ರಿಂದ ೩೦ ಹಿಂದೂಗಳ ಹತ್ಯೆಗೆ ಅವಕಾಶ ಕೊಡು ತ್ತಿದ್ದರೆ, ಅಲ್ಪಸಂಖ್ಯಾತ ತುಷ್ಟೀಕರಣದ ಯೋಜನೆಗಳ ಜೊತೆಗೆ ತಮ್ಮದೇ ಪಕ್ಷದ ದಲಿತ ಶಾಸಕರ ಮನೆಗೆ ಬೆಂಕಿ ಹಚ್ಚಿದರೆ ಕಾಪಾಡುವ ಇಚ್ಛೆ ಅವರಿ ಗಿರಲಿಲ್ಲ ಎಂದು ಟೀಕಿಸಿದರು.
ಕಾಂಗ್ರೆಸ್ ಕಾರ್ಯಕರ್ತರೇ ಕೇಸರಿ ಪೇಟ ತೊಡಿಸಲು ಹೋದರೆ ಸಿದ್ದ ರಾಮಯ್ಯ ಕಿತ್ತು ಬಿಸಾಡಿದ್ದಾರೆ. ಕುಂಕುಮವನ್ನು ಹಚ್ಚಿದರೆ ಒರೆಸಿಕೊ ಳ್ಳುತ್ತಾರೆ ಎಂದರು.
ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿ ಕಾರಕ್ಕೆ ಬರಬೇಕಿದೆ. ರಾಜ್ಯದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ಫಲಿತಾಂಶ ಬರಬೇಕು. ಇದಕ್ಕಾಗಿ ಕಾರ್ಯಕರ್ತರು ಮುಂಬ ರುವ ಎರಡು ತಿಂಗಳು ಯೋಧರ ರೀತಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.ನಮ್ಮ ಮುಂದಿರುವ ಗುರಿ ಒಂದೇ, ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕು. ೨೦೨೪ ರಲೋಕಸಭೆ ಚುನಾವಣೆಯಲ್ಲೂ ೨೫ ಕ್ಷೇತ್ರಗಳನ್ನು ಉಳಿಸಿಕೊಂಡು ನರೇಂ ದ್ರ ಮೋದಿ ಕೈ ಬಲಪಡಿಸಬೇಕಿದೆ ಎಂದರು.
ಈಶಾನ್ಯ ರಾಜ್ಯಗಳ ಚುನಾವಣೆ ಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರು ವುದಲ್ಲದೆ, ಕಾಂಗ್ರೆಸ್ನ್ನು ಕಿತ್ತು ಬಿಸಾಕಿದ್ದಾರೆ. ಸ್ವಾತಂತ್ರ್ಯ ಬಂದು ೭೫ ವರ್ಷಗಳಾದರೂ ದೇಶದಲ್ಲಿ ೬ ದಶಕ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ದೇಶದ ಮೇಲೆ ಸವಾರಿ ಮಾಡಿದೆ. ೨೦೦೪ ರಿಂದ ೧೪ ವರೆಗೆ ಕಾಂಗ್ರೆಸ್ನ ಯುಪಿಎ ಸರ್ಕಾರ ೧೦ ವರ್ಷ ನಿರಂತರ ಕೆಲಸ ಮಾಡಿದರೂ ದೇಶವ ನ್ನು ಅಭಿವೃದ್ಧಿಪಡಿಸಲಿಲ್ಲ. ಯುವ ಕರ ಕನಸಿಗೆ ಪೂರಕವಾಗಿ ಕೆಲಸ ಮಾಡಲಿಲ್ಲ. ವಿಶ್ವಮಟ್ಟದಲ್ಲಿ ತಲೆ ಎತ್ತಿ ನಡೆಯಲಾಗದ ಸ್ಥಿತಿಗೆ ದೇಶವನ್ನು ತಂದ ಕೀರ್ತಿ ಕಾಂಗ್ರೆಸ್ ಪಕ್ಷದ್ದು ಎಂದು ದೂರಿದರು.
ಅಂದು ಪ್ರಧಾನಿ ಆಗಿದ್ದ ಮನ್ ಮೋಹನ್ ಸಿಂಗ್ ಅವಧಿಯಲ್ಲಿ ೨ಜಿ ಕೋಲ್, ಕಾಮನ್ವೆಲ್ತ್, ಬೋಫೋ ರ್ಸ್ ಹಗರಣಗಳ ಮೇಲೆ ಹಗರಣ ಗಳು ೧೨ ಲಕ್ಷ ಕೋಟಿಗೂ ಹೆಚ್ಚು ಹಗರಣ ನಡೆದ ಕಾರಣ ಜಗತ್ತಿನಲ್ಲಿ ತಲೆ ಎತ್ತದಂತಾಯಿತು. ೨೦೧೪ ರ ವೇಳೆಗೆ ದೇಶಕ್ಕೆ ಭವಿಷ್ಯವೇ ಇಲ್ಲ ಎನ್ನುವ ಸ್ಥಿತಿಗೆ ಬಂದಿತು ಎಂದರು.
ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಾಗ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದಾಗಿ ಹೇಳಿದ್ದಾರೆ. ಯಡಿ ಯೂರಪ್ಪ ಸವಾಲು ಹಾಕಿದರೆ ಅದರ ಪರಿಣಾಮ ಏನಾಗುತ್ತದೆ ಎನ್ನುವುದು ನಮಗಿಂತ ಚೆನ್ನಾಗಿ ವಿರೋಧ ಪಕ್ಷದವರಿಗೆ ಗೊತ್ತಿದೆ. ಹೀಗಾಗಿ ಕುಳಿ ತಲ್ಲಿ, ನಿಂತಲ್ಲಿ ಯಡಿಯೂರಪ್ಪ ಅವರ ಹೆಸರನ್ನು ಜಪ ಮಾಡುತ್ತಿದ್ದಾರೆ ಎಂದರು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕಡೂರು ಶಾಸಕ ಬೆಳ್ಳಿ ಪ್ರಕಾಶ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಕೋ ಟ್ಯಾನ್, ರಾಜ್ಯಾಧ್ಯಕ್ಷ ಡಾ.ಸಂದೀಪ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಡಿ.ಕಲ್ಮ ರುಡಪ್ಪ, ಸಫಾಯಿ ಕರ್ಮಚಾರಿ ನಿಗಮದ ಅಧ್ಯಕ್ಷ ಕೆ.ಪಿ.ವೆಂಕಟೇಶ್, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗಡೆ, ನಗರ ಸಭೆ ಅಧ್ಯಕ್ಷ ವರಸಿದ್ದಿ ವೇಣುಗೋ ಪಾಲ್, ನಗರ ಬಿಜೆಪಿ ಅಧ್ಯಕ್ಷ ಮಧು ಕುಮಾರ್ ಅರಸ್, ಗ್ರಾಮಾಂತರ ಅಧ್ಯಕ್ಷ ಈಶ್ವರಳ್ಳಿ ಮಹೇಶ್, ಸಿಡಿಎ ಅಧ್ಯಕ್ಷ ಸಿ.ಆನಂದ್ ಇತರರು ಇದ್ದರು.
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.
ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…
ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…
ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…
ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…