ಚಿಕ್ಕಮಗಳೂರು: ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾ ಮ್ಮಯ್ಯ ವಿರುದ್ಧ ಸಚಿವ ಅಶ್ವಥ್ ನಾರಾಯಣ್ ಅವರು ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ಹನುಮಂತಪ್ಪ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ ಸಿದ್ದರಾಮಯ್ಯರನ್ನು ಟಿಪ್ಪುಗೆ ಕೊಂದ ರೀತಿಯಲ್ಲಿ ಸಿದ್ದರಾಮಯ್ಯ ಅವರನ್ನು ಕೊಲ್ಲಬೇಕು ಎಂದು ಅವಹೇಳನಕಾರಿ ಹೇಳಿಕೆ ನೀಡಿರುವ ಸಚಿವ ಅಶ್ವಥ್ ನಾರಾಯಣ್ನನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ನಾಡಿನ ಜನಪ್ರಿಯ ಮುಖ್ಯಮಂತಿ ಯಾಗಿ ಹಾಗೂ ಬಡವರ ಪರ ಕಾಳಜಿ ಹೊಂದಿ ಐದು ವರ್ಷಗಳ ಕಾಲ ಅಧಿಕಾರ ನಡೆಸಿದಂತಹ ಸಿದ್ದರಾಮಯ್ಯ ವಿರುದ್ಧ ಹಾಲಿ ಸಚಿವರು ಹೇಳಿಕೆ ನೀಡಿರುವುದನ್ನು ಖಂಡಿಸುತ್ತೇವೆ. ಈ ಸಂಬಂಧ ಮುಖ್ಯಮಂತ್ರಿಗಳು ಹಾಗೂ ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಿ ಸಚಿವ ಅಶ್ವಥ್ ನಾರಾಯಣ್ ಅವರನ್ನು ಸಂಪುಟದಿಂದ ಕೈಬಿಡಬೇಕು. ವಿಳಂಬವಾದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಬಹುಮತದಿಂದ ಆಡಳಿತಕ್ಕೆ ಬರುವುದು ಶತಸಿದ್ಧ ವಾಗಿದ್ದು ಇದನ್ನು ಸಹಿಸಿಕೊಳ್ಳಲಾರದೇ ಇಲ್ಲಸಲ್ಲದ ಹೇಳಿಕೆ ನೀಡಿ ಪ್ರಚಾರ ಗಿಟ್ಟಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ಈ ರೀತಿಯ ಅವಹೇಳನಕಾರಿ ಹೇಳಿಕೆ ಬಿಜೆಪಿಯ ವ್ಯಕ್ತಿತ್ವವನ್ನು ತಿಳಿಸುತ್ತದೆ. ಇದನ್ನು ಜನತೆ ಸೂಕ್ಷ್ಮ ವಾಗಿ ಗಮನಿಸಿ ಕ್ಷೇತ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ಗೆ ಮತ ನೀಡುವ ಮೂಲಕ ಅಧಿಕಾರ ನೀಡಲಿದ್ದಾರೆ ಎಂದರು.
ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಡಾ. ಡಿ.ಎಲ್.ವಿಜಯ್ಕುಮಾರ್ ಮಾತನಾಡಿ ರಾಜ್ಯದ ಜನಪ್ರಿಯ ನಾಯಕರ ವಿರುದ್ಧ ಸಚಿವ ಅಶ್ವಥ್ನಾರಾಯಣ್ ಅವಹೇಳನಕಾರಿ ಹೇಳಿಕೆ ನೀಡಿರುವುದು ಹಾಗೂ ಇಂತಹ ಸಚಿವ ಸಂಪುಟದಲ್ಲಿರುವುದು ನಾಚಿಕಗೇಡಿನ ಸಂಗತಿ. ಕೂಡಲೇ ಸರ್ಕಾರ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಕೆಂಪೇಗೌಡ ಆಳಿದ ನಾಡು ಕರ್ನಾಟಕ. ಇಂತಹ ನೆಲದಲ್ಲಿ ಬಿಜೆಪಿ ಪಕ್ಷದಲ್ಲಿ ವಿಕೃತ ಮನಸ್ಸಿರುವ ವ್ಯಕ್ತಿಗಳಿ ದ್ದಾರೆ ಎಂದರೆ ನಾಚಿಕೆಗೇಡಿನ ವಿಷಯ. ಕಾಂಗ್ರೆಸ್ ಹಿರಿಯ ಮುಖಂಡರ ಮೇಲೆ ಕೀಳುಮಟ್ಟದ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಪಕ್ಷದ ರಾಜ್ಯ ಪ್ರಚಾರ ಸಮಿತಿ ಸಂಚಾಲಕ ಬಿ.ಹೆಚ್.ಹರೀಶ್, ಕಿಸಾಲ್ ಸೆಲ್ ಸಂಚಾಲಕ ಸಿ.ಎನ್.ಅಕ್ಮಲ್, ನಗರಸಭಾ ಸದಸ್ಯರಾದ ಶಾದಂ ಆಲಂಖಾನ್, ಪರಮೇಶ್, ಗುರುಮಲ್ಲಪ್ಪ, ಜಾವೀದ್, ಮುಖಂಡರಾದ ಹಿರೇಮಗಳೂರು ರಾಮಚಂದ್ರ, ಶಿವಕುಮಾರ್, ಎಂ.ಅನ್ಸರ್ ಆಲಿ, ಆನಂದ್, ಪ್ರಕಾಶ್, ನಾಗಭೂಷಣ್, ರಾಮಣ್ಣ, ಜಗದೀಶ್ ಮತ್ತಿತರರು ಹಾಜರಿದ್ದರು.