ಚಿಕ್ಕಮಗಳೂರು: ನಯನಾ ಮೋಟಮ್ಮ ಅವರಿಗೆ ಚುನಾವಣೆಗೆ ಟಿಕೆಟ್ ನೀಡಲು ನಿರ್ಧರಿಸಿರುವ ಕಾಂಗ್ರೆಸ್ ಪಕ್ಷದ ನಿರ್ಧಾರದ ವಿರುದ್ಧ ಪಕ್ಷದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಇದು ಮೂಡಿಗೆರೆ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಕ್ಕೆ ಕಾರಣವಾಗಿದೆ.
ಜಿಲ್ಲೆಯ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ವಸ್ತಾರೆಯಲ್ಲಿ ಸಭೆ ನಡೆಸಿದ ಕಾಂಗ್ರೆಸ್ ನಾಯಕರು, ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿ ನಯನಾ ಮೋಟಮ್ಮ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರ ಕುಟುಂಬಕ್ಕೆ ಕಾಂಗ್ರೆಸ್ ಟಿಕೆಟ್ ನೀಡಬಾರದು ಎಂದು ಒತ್ತಾಯಿಸಿದರು.
ನಯನಾ ಮೋಟಮ್ಮ ಅವರಿಗೆ ಟಿಕೆಟ್ ನೀಡಿದರೆ ಪಕ್ಷದ ಅಭ್ಯರ್ಥಿಯ ಸೋಲನ್ನು ಖಚಿತ ಪಡಿಸಲಾಗುವುದು ಎಂದು ಅತೃಪ್ತ ನಾಯಕರು ವಾದಿಸಿದರು. ನಯನಾ ಮೋಟಮ್ಮ ಅವರಿಗೆ ಮುಂದಿನ ದಿನಗಳಲ್ಲಿ ಟಿಕೆಟ್ ನೀಡದಂತೆ ಜಿಲ್ಲಾ ನಾಯಕರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (ಕೆಪಿಸಿಸಿ) ಮನವಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.