News Karnataka Kannada
Saturday, April 27 2024
ಚಿಕಮಗಳೂರು

ಚಿಕ್ಕಮಗಳೂರು: ಎರಡನೇ ದಿನಕ್ಕೆ ಕಾಲಿಟ್ಟ ಗುತ್ತಿಗೆ ಪೌರಕಾರ್ಮಿಕರ ಪ್ರತಿಭಟನೆ

Contract pourakarmikas' protest enters second day
Photo Credit : News Kannada

ಚಿಕ್ಕಮಗಳೂರು: ಮನೆ ಮನೆ ಕಸ ಸಂಗ್ರಹಕಾರರ ಪೌರಕಾರ್ಮಿಕರರಿಗೆ ಕನಿಷ್ಟ ವೇತನವನ್ನು ನೀಡದೇ ಹಾಗೂ ಸುರಕ್ಷತೆಯ ಕಿಟ್ ವ್ಯವಸ್ಥೆಯು ಕಲ್ಪಿಸದಿರುವ ಪರಿಣಾಮ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಒಳಗಾಗಿ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ದಸಂಸ (ಪ್ರೋ.ಕೃಷ್ಣಪ್ಪ ಸ್ಥಾಪಿತ ಬಣ) ರಾಜ್ಯ ಸಂಚಾಲಕ ತರೀಕೆರೆ ವೆಂಕಟೇಶ್ ಹೇಳಿದರು.

ನಗರದ ಆಜಾದ್‌ಪಾರ್ಕ್‌ನಲ್ಲಿ ಎರಡನೇ ದಿನಕ್ಕೆ ಕಾಲಿಟ್ಟ ಗುತ್ತಿಗೆ ಪೌರಕಾರ್ಮಿಕರ ಸಂಘದ ಪ್ರತಿಭಟನೆ ಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಪ್ರತಿನಿತ್ಯ ಮನೆ ಮನೆಗಳಿಗೆ ಗಂಟೆಗಾಡಿಗಳ ಮೂಲಕ ಕಸ ಸಂಗ್ರಹಿಸುವವರಿಗೆ ಸೂಕ್ತ ಭದ್ರತೆಯಿಲ್ಲದೇ ಪರಿತಪಿಸುವಂತಾಗಿದೆ ಎಂದು ತಿಳಿಸಿದರು.

ಕಳೆದ ಹಲವಾರು ವರ್ಷಗಳಿಂದ ಕಸ ಸಂಗ್ರಹಣೆ ವೃತ್ತಿಯಲ್ಲಿ ಬದುಕುತ್ತಿರುವ ಪೌರಕಾರ್ಮಿಕರು ಅನೇಕ ರೋಗರುಜಿನಿಗಳಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗೆಂದು ತೆರಳಿದರೆ ಸಾವಿರಾರು ರೂ.ಗಳು ತಗುಲಲಿದೆ. ಇದರೊಂದಿಗೆ ವೃತ್ತಿಯಲ್ಲಿ ಕನಿಷ್ಟ ವೇತನವು ಸಿಗದ ಪರಿಣಾಮ ಊಟಕ್ಕಿದ್ದರೆ ಬಟ್ಟೆಗಿಲ್ಲ, ಬಟ್ಟೆಗಿದ್ದರೆ ಊಟಕ್ಕಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ನಗರಸಭಾ ಆಡಳಿತವು ಗುತ್ತಿಗೆ ಪೌರ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಮೂಲಕ ಸಮಾಜ ದಲ್ಲಿ ಸದೃಢವಾಗಿ ಬದುಕಲು ಅವಕಾಶ ಮಾಡಿಕೊಡಬೇಕು.

ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಪ್ರತಿಭಟನೆ ನಂತರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿ ಮಾಹಿತಿ ತಿಳಿಸಿದ ತರೀಕೆರೆ ವೆಂಕಟೇಶ್ ಕೂಡಲೇ ಗುತ್ತಿಗೆ ಪೌರಕಾರ್ಮಿಕರ ಕನಿಷ್ಟ ವೇತನ, ಸೂಕ್ತ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಚಾಲಕ ಕೀರ್ತಿ, ಸಂಘದ ಅಧ್ಯಕ್ಷ ನಾಗರಾಜ್, ಮುಖಂಡರುಗಳಾದ ಮೋಹನ್, ಆನಂದ್, ಶ್ರೀನಿವಾಸ್, ಎಸ್.ಪಿ.ಪವನ ಮತ್ತಿತರರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು