ಚಿಕ್ಕಮಗಳೂರು, ನ.11: ತರೀಕೆರೆ ಪಟ್ಟಣದಲ್ಲಿ ಶುಕ್ರವಾರ ನಡೆದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಮಾಜಿ ಶಾಸಕ ಶ್ರೀನಿವಾಸ್ ಅವರನ್ನು ತರಾಟೆಗೆ ತೆಗೆದುಕೊಂಡರು.
ತರೀಕೆರೆಯ ಮಾಜಿ ಶಾಸಕನಿಗೆ ಜನರು ಛೀಮಾರಿ ಹಾಕಿದ್ದು, ಶ್ರೀ ಗುರು ರೇವಣಸಿದ್ದೇಶ್ವರ ದೇವಸ್ಥಾನ ಸಮಿತಿಯ ಅನುದಾನ ದುರುಪಯೋಗವಾಗಿದೆ ಎಂದು ಆರೋಪಿಸಿ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಮನವಿ ಮಾಡಿದ್ದಾರೆ.
ರೇವಣಸಿದ್ದೇಶ್ವರ ಕುರುಬ ಸಮಾಜದ ಮುಖಂಡರು ಕೂಡ ಮೆರವಣಿಗೆಯ ಟ್ರಾಕ್ಟರ್ ಏರುವುದನ್ನು ಮತ್ತು ಧ್ವಜಾರೋಹಣ ಮಾಡುವುದನ್ನು ಬಲವಾಗಿ ವಿರೋಧಿಸಿದ್ದಾರೆ. ಈ ಪ್ರಕ್ರಿಯೆಯಲ್ಲಿ ಅವರನ್ನು ಸಂಪೂರ್ಣವಾಗಿ ಅವರು ನಿರ್ಲಕ್ಷಿಸಿ ಕಾರ್ಯಕ್ರಮವನ್ನು ಮುಂದುವರಿಸಿದರು ಎಂದು ವರದಿಯಾಗಿದೆ.