ಚಿಕ್ಕಮಗಳೂರು: ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ 6 ತಿಂಗಳೊಳಗೆ ದತ್ತಪೀಠ ಸಮಸ್ಯೆ ಬಗೆಹರಿಯಲಿದೆ ಎಂದು ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಹೇಳಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಆರು ತಿಂಗಳೊಳಗೆ ಸಮಸ್ಯೆ ಬಗೆಹರಿಯದಿದ್ದರೆ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಸವಾಲು ಹಾಕಿದರು. ದತ್ತಪೀಠ ವಿವಾದ ಇನ್ನೂ ಜೀವಂತವಾಗಿರಲು ಕಾಂಗ್ರೆಸ್ ಮತ್ತು ಬಿಜೆಪಿ ಕಾರಣ ಎಂದು ಅವರು ಹೇಳಿದರು.
“ವೋಟ್ ಬ್ಯಾಂಕ್ ಗಾಗಿ ಈ ವಿಷಯವನ್ನು ಜೀವಂತವಾಗಿಡುವ ಮೂಲಕ ಎರಡೂ ಪಕ್ಷಗಳು ರಾಜಕೀಯ ಮಾಡುತ್ತಿವೆ” ಎಂದು ಅವರು ಹೇಳಿದರು.