ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಫೆ.20ರಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಕೊಪ್ಪಕ್ಕೆ ಆಗಮಿಸಿ ಅಡಿಕೆ ಬೆಳೆಗಾರರೊಂದಿಗೆ ಸಭೆ ನಡೆಸಲಿದ್ದು, ನಂತರ ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾಯಿತ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.21ರಂದು ಬೆಳಗ್ಗೆ 9 ಗಂಟೆಗೆ ಶೃಂಗೇರಿಯಿಂದ ಹೊರಟು ಚಿಕ್ಕಮಗಳೂರಿಗೆ ತೆರಳಿ ಶಾಸಕ ಸಿ.ಟಿ.ರವಿ ಅವರ ಮನೆಗೆ ಭೇಟಿ ನೀಡಿ, 10.30ಕ್ಕೆ ಬೈಕ್ ರ್ಯಾಲಿ ಮೂಲಕ ಕುವೆಂಪು ಕಲಾಮಂದಿರಕ್ಕೆ ತೆರಳಲಿದ್ದಾರೆ.
ಅಲ್ಲಿ ಅವರು ವಿವಿಧ ಕ್ಷೇತ್ರಗಳ ಬುದ್ಧಿಜೀವಿಗಳು ಮತ್ತು ಗಣ್ಯರೊಂದಿಗೆ ಸಭೆ ನಡೆಸಿ ನಂತರ ಬೇಲೂರಿಗೆ ತೆರಳಲಿದ್ದಾರೆ.